Belagavi NewsBelgaum NewsKannada NewsKarnataka NewsNationalPolitics
*ರಣಹದ್ದು ಡಿಕ್ಕಿ: ತುರ್ತು ಭೂಸ್ಪರ್ಶ ಮಾಡಿದ ವಿಮಾನ*

ಪ್ರಗತಿವಾಹಿನಿ ಸುದ್ದಿ: ರಣಹದ್ದು ಡಿಕ್ಕಿ ಹೊಡೆದ ಕಾರಣ ರಾಂಚಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವು ತುರ್ತು ಭೂಸ್ಪರ್ಶ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.
ರಣ ಹದ್ದು ಡಿಕ್ಕಿ ಹೊಡೆಯುತ್ತಿದ್ದಂತೆ ತುರ್ತು ಭೂಸ್ಪರ್ಶ ಮಾಡುವ ಮೊದಲು ವಿಮಾನವು 4,000 ಅಡಿ ಎತ್ತರದಲ್ಲಿ ಹಲವು ಸುತ್ತು ಹಾರಾಟ ನಡೆಸಿದೆ ಎಂದು ತಿಳಿದು ಬಂದಿದೆ.
175 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಪಾಟ್ನಾದಿಂದ ರಾಂಚಿಗೆ ಬರುತ್ತಿತ್ತು. ರಾಂಚಿಯಿಂದ ಸುಮಾರು 10 ರಿಂದ 12 ನಾಟಿಕಲ್ ಮೈಲುಗಳಷ್ಟು ದೂರದಲ್ಲಿರುವಾಗ ವಿಮಾನಕ್ಕೆ ರಣಹದ್ದು ಡಿಕ್ಕಿ ಹೊಡೆದಿದೆ. ಕೂಡಲೇ ಪೈಲಟ್ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.