Kannada NewsKarnataka NewsLatest
ಶಂಕರಗೌಡ ಪಾಟೀಲ ಅವರಿಗೆ ಅದ್ಧೂರಿ ಸ್ವಾಗತ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡು ಅಧಿಕಾರ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ತವರೂರಿಗೆ ಆಗಮಿಸಿದ ಶಂಕರಗೌಡ ಪಾಟೀಲ ಅವರನ್ನು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು.
ಭಾನುವಾರ ಮಧ್ಯಾಹ್ನ ಅವರು ಆಗಮಿಸುತ್ತಿದ್ದಂತೆ ಸೇರಿದ್ದ ಅಪಾರ ಸಂಖ್ಯೆಯ ಅಭಿಮಾನಿಗಳು ಘೋಷಣೆಗಳನ್ನು ಕೂಗಿ, ಹಾರಗಳನ್ನು ಹಾಕಿ ಸ್ವಾಗತಿಸಿದರು.





