Latest

ಪ್ರಮಾಣಪತ್ರ ಸ್ವೀಕರಿಸಿದ ಈರಪ್ಪ ಕಡಾಡಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಳಗಾವಿಯ ಈರಪ್ಪ (ಈರಣ್ಣ) ಕಡಾಡಿ ರಾಜ್ಯಸಭಾ ಸದಸ್ಯರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಈ ಕುರಿತು ಪ್ರಮಾಣ ಪತ್ರವನ್ನು ಸ್ವೀಕರಿಸಿದರು.

ಬೆಂಗಳೂರಿನಲ್ಲಿ ಚುನಾವಣಾ ಅಧಿಕಾರಿ ವಿಶಾಲಾಕ್ಷಿ ಅವರಿಂದ ಈರಣ್ಣ ಕಡಾಡಿ ಪ್ರಮಾಣಪತ್ರ ಸ್ವೀಕರಿಸಿದರು. ಈ  ಸಂದರ್ಭದಲ್ಲಿ ಕೆಎಂಎಫ್ ರಾಜ್ಯಾಧ್ಯಕ್ಷ, ಮಾಜಿ ಸಚಿವರು ಹಾಗೂ ಅರಭಾವಿ ಶಾಸಕ  ಬಾಲಚಂದ್ರ ಜಾರಕಿಹೊಳಿ, ಮಾಜಿ ಸಚಿವ ಶಶಿಕಾಂತ ನಾಯಿಕ ಹಾಗೂ ಮಾಜಿ ಶಾಸಕ  ಹಾಗೂ ಬಿಜೆಪಿ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ಮತ್ತು ಇತರರು ಉಪಸ್ಥಿತರಿದ್ದರು.

Related Articles

Back to top button