
ಪ್ರಗತಿವಾಹಿನಿ ಸುದ್ದಿ: ಹಿಡಕಲ್ ಚೆಕ್ ಪೋಸ್ಟ್ ಹತ್ತಿರ 900 ಎಂ.ಎಂ ಪಿಎಸ್ಸಿ ಕೊಳವೆ ಮಾರ್ಗ ಸೋರಿಕೆಯಾಗಿರುವ ಕಾರಣ ತುರ್ತು ದುರಸ್ಥಿ ಕಾರ್ಯ ಕೈಗೊಂಡಿರುವುದರಿಂದ ಏಪ್ರಿಲ್ 1 ಮತ್ತು 2 ರಂದು ಬೆಳಗಾವಿ ನಗರಕ್ಕೆ ನೀರು ಸರಬರಾಜು ಮಾಡುವಲ್ಲಿ ವ್ಯತ್ಯಯ ಉಂಟಾಗಲಿದೆ.
ಇಂತಹ ಅನಿವಾರ್ಯ ಸಮಯದಲ್ಲಿ ಸಾರ್ವಜನಿಕರು ಮೇ॥ ಎಲ್ & ಟಿ ಯೊಂದಿಗೆ ಸಹಕರಿಸಬೇಕೆಂದು ಮಹಾನಗರ ಪಾಲಿಕೆ ಮತ್ತು ಕೆ.ಯು.ಐ.ಡಿ.ಎಫ್.ಸಿ ಅವರು ಪ್ರಕಟಣೆಯಲ್ಲಿ ಮನವಿ ಮಾಡಿರುತ್ತಾರೆ.