Latest

ಧರ್ಮಸ್ಥಳ ಪ್ರವಾಸ ಮುಂದೂಡಿ- ವೀರೇಂದ್ರ ಹೆಗ್ಗಡೆ ಮನವಿ

ಪ್ರಗತಿವಾಹಿನಿ ಸುದ್ದಿ, ಧರ್ಮಸ್ಥಳ

Home add -Advt

ನೀರಿನ ತೀವ್ರ ಅಭಾವದ ಹಿನ್ನೆಲೆಯಲ್ಲಿ ಧರ್ಮಸ್ಥಳ ಪ್ರವಾಸವನ್ನು ಸ್ವಲ್ಪಕಾಲ ಮುಂದೂಡುವಂತೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭಕ್ತರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಎಲ್ಲೆಡೆಯಂತೆ ಧರ್ಮಸ್ಥಳದಲ್ಲೂ ನೀರಿನ ತೀವ್ರ ಅಭಾವ ಉಂಟಾಗಿದೆ. ನೇತ್ರಾವತಿ ನದಿಯಲ್ಲೂ ನಿರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದೆ. ಹಾಗಾಗಿ ಭಕ್ತರು ಬಂದರೆ ನೀರಿನ ಸಮಸ್ಯೆ ಉಂಟಾಗಬಹುದು. ಆದ್ದರಿಂದ ಪ್ರವಾಸವನ್ನು ಸ್ವಲ್ಪಕಾಲ ಮುಂದೂಡಬೇಕು ಎಂದು ಅವರು ವಿನಂತಿಸಿದ್ದಾರೆ. 

Related Articles

Back to top button