
ಕೋವಿಡ್ ಸಂತ್ರಸ್ತ ಕುಟುಂಬಸ್ಥರಿಗೆ ಪರಿಹಾರದ ಚೆಕ್ ವಿತರಿಸಿದ ಲಕ್ಷ್ಮಿ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಸ್ಥರಿಗೆ ಶನಿವಾರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪರಿಹಾರದ ಚೆಕ್ ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ತಹಶಿಲ್ದಾರ ಆರ್.ಕೆ. ಕುಲಕರ್ಣಿ, ಯುವರಾಜ ಕದಂ, ಬಾಗಣ್ಣ ನರೋಟಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.