Kannada NewsKarnataka News

ಕ್ಷೇತ್ರದ ಜನರು ಕುಟುಂಬದ ಸದಸ್ಯರು ಎಂದು ತಿಳಿದು ಕೆಲಸ ಮಾಡುತ್ತಿದ್ದೇವೆ -ಗಣೇಶ ಹುಕ್ಕೇರಿ

Home add -Advt

 

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ  – ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಿಡಸೋಸಿಯ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹಾಗೂ ಶಾಸಕ ಗಣೇಶ ಹುಕ್ಕೇರಿ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಚಾಲನೆ ನೀಡಿದರು.

ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಮಹಾದೇವ ಮಂದಿರದ ಶಂಕುಸ್ಥಾಪನೆ, ಶಾಲಾ ಕೊಠಡಿಗಳ ಉದ್ಘಾಟನೆ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡದ ಲೋಕಾರ್ಪಣೆ ಕಾಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಬಳಿಕ ಮಾತನಾಡಿದ ಶಾಸಕ ಗಣೇಶ ಹುಕ್ಕೇರಿ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾಮಗಾರಿ ಮಾಡಲಾಗುತ್ತಿದೆ. 1.59 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಎಲ್ಲರ ಸಹಕಾರದಿಂದ ಕೊರೊನಾ ನಿಯಂತ್ರಿಸಬೇಕಾಗಿದೆ ಎಂದರು.
ಕಲ್ಲೋಳ-ಯಡೂರ ಬ್ಯಾರೇಜ ನಿರ್ಮಾಣ ಮಾಡಲಾಗುತ್ತಿದೆ. ಮಾಂಜರಿ ಗ್ರಾಮದಲ್ಲಿ 5.40 ಕೋಟಿ ವೆಚ್ಚದಲ್ಲಿ ಬ್ಯಾರೇಜ ನಿರ್ಮಾಣ ಮಾಡಲಾಗುತ್ತಿದೆ. ಕೊರೊನಾ ವಾರಿಯರ್ಸ್ ಜವಾಬ್ದಾರಿ ಅರಿತು ಕೆಲಸ ಮಾಡುತ್ತಿರುವುದು ಸಂತಸ ತಂದಿದೆ. ಕ್ಷೇತ್ರದ ಜನರು ಕುಟುಂಬದ ಸದಸ್ಯರು ಎಂದು ತಿಳಿದು ಕೆಲಸ ಮಾಡುತ್ತಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದರು.
ಬಳಿಕ ನಿಡಸೋಸಿಯ ಶ್ರೀ ಪಂಚಮ ಶಿವಲಿಂಗೇಶ್ವರ ಮಹಾಸ್ವಾಮೀಜಿ ಮಾತನಾಡಿ ರೈತರಿಗೆ ನೀರು ಮತ್ತು ವಿದ್ಯುತ್ ಸಮರ್ಪಕ ನೀಡಿದರೇ ರೈತರೇ ಸರಕಾರಕ್ಕೆ ಸಾಲ ಕೊಡುತ್ತಾರೆ. ಅಂತಹ ವಿಚಾರ ನಡೆದಿದೆ. ಹೀಗಾಗಿ ಹುಕ್ಕೇರಿ ಕುಟುಂಬ ದೂರದೃಷ್ಟಿ ಇಟ್ಟುಕೊಂಡು ಅಭಿವೃದ್ಧಿ ಮಾಡುತ್ತಿದೆ. ಅಂಡರಗ್ರೌಂಡ ವಿದ್ಯುತ್ ಯಕ್ಸಂಬಾದಲ್ಲಿ ಕಲ್ಪಿಸಿದ್ದಾರೆ. ಸರಕಾರದ ಪ್ರತಿಯೊಂದು ಯೋಜನೆ ಅನುದಾನ ಒದಗಿಸುವಲ್ಲಿ ಹುಕ್ಕೇರಿ ಕುಟುಂಬ ಯಶಸ್ಸು ಸಾಧಿಸಿದೆ. ಮನುಷ್ಯ ಅಧಿಕಾರ ದುರುಪಯೋಗ ಮಾಡುವುದಕ್ಕಿಂತ ಉಪಯೋಗ ಮಾಡಿಕೊಳ್ಳುವುದು ಅವಶ್ಯಕ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಾಪಂ ಸದಸ್ಯ ರವೀಂದ್ರ ಮಿರ್ಜೆ, ಮಲ್ಲಿಕಾರ್ಜುನ ಪಾಟೀಲ, ಬಸವರಾಜ ಪಾಟೀಲ, ಎಲ್.ಬಿ.ಖೋತ, ರಾಜೇಂದ್ರ ಕರಾಳೆ, ಪ್ರಕಾಶ ರಾಚನ್ನವರ, ಅಶೋಕ ಮಿರ್ಜೆ, ಪ್ರಕಾಶ ಮಿರ್ಜೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Articles

Back to top button