Kannada NewsKarnataka NewsLatest

ಮಹಾರಾಷ್ಟ್ರದಲ್ಲಿ ಕನ್ನಡಿಗರಿಗೆ ಅನ್ಯಾಯವಾದರೆ ಸಹಿಸಲ್ಲ -ಲಕ್ಷ್ಮಣ ಸವದಿ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು -ಮಹಾರಾಷ್ಟ್ರದಲ್ಲಿ ಕನ್ನಡಿಗರಿಗೆ ಅನ್ಯಾಯವಾದರೆ ನಾವು ಸಹಿಸಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಲ್ಲಿನ ಮುಖ್ಯಮಂತ್ರಿಗೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಗಡಿ ಸಂಬಂಧ ಅನವಶ್ಯಕವಾಗಿ ಹೇಳಿಕೆ ನೀಡಿದ್ದಾರೆ. ಅವರು ಈ ಹಿಂದೆ ರಾಜ್ ಠಾಕ್ರೆ ನೀಡಿದ್ದ ಹೇಳಿಕೆಯನ್ನು ನೆನಪಿಸಿಕೊಳ್ಳಬೇಕು. ಅದನ್ನು ಬಿಟ್ಟು ಅನಗತ್ಯವಾಗಿ ಗಡಿ ವಿಷಯ ಕೆದಕುವುದು ಸರಿಯಲ್ಲ ಎಂದಿದ್ದಾರೆ.

ಕನ್ನಡಿಗರ, ಕರ್ನಾಟಕದ ನೆಲ, ಜಲ ರಕ್ಷಣೆಗೆ ಸರಕಾರ ಬದ್ದವಾಗಿದೆ. ಈ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದೂ ಅವರು ಹೇಳಿದ್ದಾರೆ.

ಶೀಘ್ರ ಸಭೆ

ಇದೇ ವೇಳೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗಡಿ ವಿಷಯ ಸಂಬಂಧ ಕಾನೂನು ಹೋರಾಟದ ವಿಷಯವಾಗಿ ಚರ್ಚಿಸಲು ಮುಖ್ಯಮಂತ್ರಿಗಳು ಶೀಘ್ರದಲ್ಲೇ ಸಭೆಯೊಂದನ್ನು ನಡೆಸಲಿದ್ದಾರೆ ಎಂದಿದ್ದಾರೆ.

Home add -Advt

ಗಡಿ ವಿವಾದ ಮಹಾಜನ್ ವರದಿ ಪ್ರಕಾರ ಮುಗಿದ ಅಧ್ಯಾಯ. ಆದರೂ ಅನಗತ್ಯವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಕೆದಕುತ್ತಿದ್ದಾರೆ. ಈ ಹಿಂದೆ ಶರದ್ ಪವಾರ್ ಈ ಬಗ್ಗೆ ಮಾತನಾಡುತ್ತಿದ್ದರು. ಆದರೆ ನಂತರ ಅವರಿಗೆ ನಿಜ ವಿಷಯ ಅರಿವಾಗಿ, ಇನ್ನು ಮುಂದೆ ಗಡಿ ವಿಷಯದ ಕುರಿತು ಮಾತನಾಡುವುದಿಲ್ಲ ಎಂದು ಆ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ಈಗ ಉದ್ಧವ್ ಠಾಕ್ರೆ ಮಾತನಾಡುತ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ಶಾಂತಿ, ಸುವ್ಯವಸ್ಥೆ ಕಾಪಾಡಲು ಗಡಿ ಭಾಗದಲ್ಲಿ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳುವಂತೆ ಬೆಳಗಾವಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದೂ ಬೊಮ್ಮಾಯಿ ತಿಳಿಸಿದರು.

ಒಂದಿಂಚೂ ಭೂಮಿ ಕೊಡಲ್ಲ -ಶಿವಸೇನೆಗೆ ಯಡಿಯೂರಪ್ಪ ಖಡಕ್ ಸಂದೇಶ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button