Karnataka News

*ಮತ್ತೆ ಚಂಡಮಾರುತ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.

ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಹಗುರ ಮೋಡಗಳು ಆವರಿಸುವ ಸಾಧ್ಯತೆಗಳಿವೆ. ಮಳೆಯ ಸಾಧ್ಯತೆಗಳಿಲ್ಲ.

ಉತ್ತರ ಸುಮಾತ್ರ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯು ಪ್ರಭಲಗೊಂಡು, ನವೆಂಬರ್ 26ರ ಸುಮಾರಿಗೆ ಚಂಡಮಾರುತವಾಗಿ ಶ್ರೀಲಂಕಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಅಲ್ಲಿಂ ದುರ್ಬಲಗೊಂಡು ಉತ್ತರಾಭಿಮುಖವಾಗಿ ಚಲಿಸಿ ತಮಿಳುನಾಡು, ಆಂದ್ರ ಕರಾವಳಿಗೆ ತಲಪುವ ನಿರೀಕ್ಷೆಯಿದೆ.


ಇದರ ಪ್ರಭಾವದಿಂದ ಕರ್ನಾಟಕದಲ್ಲಿ ನವೆಂಬರ್ 27ರಿಂದ ಡಿಸೆಂಬರ್ 2ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದ್ದರೂ, ನವೆಂಬರ್ 25ರ ತನಕ ಕಾದು ನೋಡಬೇಕಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button