Latest

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ರಾಜಧಾನಿ ಬೆಂಗಳೂರಿಗೆ ಹೊಸ ನಿಯಮಗಳು ಜಾರಿಯಾಗಿವೆ.

Home add -Advt

ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಸಚಿವ ಡಾ.ಆರ್.ಅಶೋಕ್, ರಾಜ್ಯಾದ್ಯಂತ ಎರಡು ವಾರಗಳ ಕಾಲ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ವೇಳೆ ಹೋಟೆಲ್ ಗಳಲ್ಲಿ ಪಾರ್ಸೆಲ್, ಅಗತ್ಯ ಸೇವೆಗಳು ಮಾತ್ರ ಇರಲಿವೆ ಎಂದು ಹೇಳಿದರು.

ಬೆಂಗಳೂರಿನಲ್ಲಿ 10, 12ನೇ ತರಗತಿ ಹೊರತುಪಡಿಸಿ ಉಳಿದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಉಳಿದೆಡೆಗಳಲ್ಲಿ ಶಾಲಾ-ಕಾಲೇಜು ಈಗಿರುವಂತೆಯೇ ಮುಂದುವರೆಯಲಿದೆ.

ರಾಜ್ಯದಲ್ಲಿ ಸರ್ಕಾರಿ ಕಚೇರಿಗಳು, ಮಾಲ್ ಗಳು, ಚಿತ್ರಮಂದಿರ, ಪಬ್, ಬಾರ್ ಪಬ್ ಗಳ ಒಟ್ಟು ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಸಮಗ್ರ ವಿವರಕ್ಕೆಇಲ್ಲಿ ಕ್ಲಿಕ್ ಮಾಡಿ :

COVUD Order 4-1

Related Articles

Back to top button