Latest

ರಾಹುಲ್ ವಿರುದ್ಧ ತೀರ್ಪು ನೀಡಿದ ನ್ಯಾಯಾಧೀಶರ ಬಗ್ಗೆ ದಿಗ್ವಿಜಯ ಸಿಂಗ್ ಹೇಳಿದ್ದೇನು?

ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ತೀರ್ಪು ನೀಡಿದ ನ್ಯಾಯಾಧೀಶರನ್ನು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಟೀಕಿಸಿದ್ದಾರೆ.

Home add -Advt

ಪ್ರಕರಣದ ತೀರ್ಪಿನ ಬಗ್ಗೆ ಬಹಿರಂಗವಾಗಿ ಪ್ರತಿಕ್ರಿಯಿಸಿದ ದಿಗ್ವಿಜಯ ಸಿಂಗ್ “ನ್ಯಾಯಾಧೀಶರು ಒಮ್ಮೆ ಗೃಹ ಸಚಿವ ಅಮಿತ್ ಶಾ ಅವರ ವಕೀಲರಾಗಿದ್ದರು ಎಂಬ ವಿಷಯವನ್ನು ಕೇಳಿದ್ದೇನೆ” ಎಂದು ಹೇಳಿದ್ದಾರೆ.

“ರಾಹುಲ್ ಗಾಂಧಿ ಅವರ ವಿಷಯದಲ್ಲಿ ಈ ತೀರ್ಪನ್ನು ನಾವು ನಿರೀಕ್ಷಿಸಿರಲಿಲ್ಲ” ಎಂದು ದಿಗ್ವಿಜಯ ಸಿಂಗ್ ಹೇಳಿದ್ದಾರೆ.

‘ಮೋದಿ ಉಪನಾಮ’ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನ್ಯಾಯಾಲಯದಿಂದ 2 ವರ್ಷ ಶಿಕ್ಷೆಗೆ ಗುರಿಯಾದ ನಂತರ ತಮ್ಮ ಲೋಕಸಭಾ ಸದಸ್ಯತ್ವದಿಂದ ವಜಾಗೊಂಡಿದ್ದ ರಾಹುಲ್ ತಮ್ಮ ವಿರುದ್ಧದ ದೋಷಾರೋಪಕ್ಕೆ ತಡೆ ಕೋರಿ ಮಾಡಿದ ಮನವಿಯನ್ನು ಸೂರತ್ ನ್ಯಾಯಾಲಯ ಗುರುವಾರವಷ್ಟೇ ವಜಾಗೊಳಿಸಿದೆ.

ಈ ಬೆಳವಣಿಗೆಯ ನಂತರ ದಿಗ್ವಿಜಯ ಸಿಂಗ್ ತಮ್ಮ ಅಸಮಾಧಾನ ಪ್ರಕಟಿಸಿದ್ದಾರೆ.

https://pragati.taskdun.com/bjp-leaderscongress-joind-k-shivakumar/

https://pragati.taskdun.com/d-k-shivakumarpressmeetbjpvidhanasabha-election/
https://pragati.taskdun.com/pm-narendra-modicallk-s-eshwarappa/

Related Articles

Back to top button