Kannada NewsKarnataka NewsLatest

ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಎಸಿಬಿ ಬಲೆಗೆ; ಇಬ್ಬರ ಬಂಧನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಪಾನ್ ಮಸಾಲಾ, ಸೆಂಟೆಂಡ್ ಸುಪಾರಿ ಮತ್ತು ತಂಬಾಕು ಪ್ಯಾಕ್ಟರಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕನ್ಸೆಂಟ್ ಫಾರ್ ಆಪರೇಷನ್ (ಸಿಎಫ್‌ಓ) ನೇದ್ದರ ಅನುಮತಿಗಾಗಿ 30 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ.

ದಿನಾಂಕ: ೧೩.೦೫.೨೦೨೨ ರಂದು ಫಿರ‍್ಯಾದಿ  ರಾಜು ಲಕ್ಷ್ಮಣ ಪಾಶ್ಚಾಪೂರೆ (ಸಾಃಉತ್ತಮ ಟಾಕೀಜ್ ಹಿಂದೆ ಹಳೆ ಚಂದೂರ ರಸ್ತೆ ಇಚಲಕರಂಜಿ ಜಿಃಕೊಲ್ಹಾಪೂರ)  ಎಸಿಬಿ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಫಿರ‍್ಯಾದಿ ನೀಡಿದ್ದರು.

ಒಂದು ವರ್ಷದಿಂದ ಚಿಕ್ಕೋಡಿ ತಾಲೂಕಿನ ಬೋರಗಾಂವದಲ್ಲಿ ಆರ್‌ಪಿ ಪ್ರೊಡಕ್ಷನ್ ಎಂಬ ಹೆಸರಿನಿಂದ ಪಾನ್ ಮಸಾಲಾ, ಸೆಂಟೆಂಡ್ ಸುಪಾರಿ ಮತ್ತು ತಂಬಾಕು ಪ್ಯಾಕ್ಟರಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕನ್ಸೆಂಟ್ ಫಾರ್ ಆಪರೇಷನ್ (ಸಿಎಫ್‌ಓ) ನೇದ್ದರ ಅನುಮತಿಗೆ ಪ್ರಯತ್ನಿಸುತ್ತಿದ್ದರು.

ಈ ಕುರಿತು  ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಿ ಈ ಅನುಮತಿಗಾಗಿ ಚಿಕ್ಕೋಡಿಯಲ್ಲಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿರುವ ಅಧಿಕಾರಿಗಳನ್ನು ಭೇಟಿಯಾದಾಗ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ರೂ.೩೦,೦೦೦/-ಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.

Home add -Advt

ಬಿ.ಎಸ್. ನೇಮಗೌಡ, ಪೊಲೀಸ್ ಅಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ, ಉತ್ತರ ವಲಯ, ಬೆಳಗಾವಿ ರವರ ಮಾರ್ಗದರ್ಶನದಲ್ಲಿ ಪಿರ್ಯಾದಿಯವರು ಈ ಬಗ್ಗೆ ನೀಡಿದ ದೂರನ್ನು  ಮಹಾಂತೇಶ ಎಸ್.ಜಿದ್ದಿ, ಪೊಲೀಸ್ ಉಪಾಧೀಕ್ಷಕರವರು ದಾಖಲಿಸಿಕೊಂಡಿದ್ದರು. ನಿರಂಜನ್ ಎಂ. ಪಾಟೀಲ್, ಪೊಲೀಸ್ ನಿರೀಕ್ಷಕರು ಹಾಗೂ  ಅಲಿ ಶೇಖ್, ಪೊಲೀಸ್ ನಿರೀಕ್ಷಕರು, ಧಾರವಾಡ ಹಾಗೂ ಬೆಳಗಾವಿ ಭ್ರಷ್ಟಾಚಾರ ದಳ ಪೊಲೀಸ್ ಠಾಣೆಗಳ ಸಿಬ್ಬಂದಿ ಕಾರ್ಯಚರಣೆ ನಡೆಸಿದರು.

ದಿನಾಂಕ:೧೬.೦೫.೨೦೨೨ ರಂದು ವಿಜಯಕುಮಾರ ಶಾಂತಪ್ಪ ಶೆಂಡುರಿ ಕ್ಷೇತ್ರ ಸಹಾಯಕ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಚಿಕ್ಕೋಡಿ  ಇವರು ಪ್ರದೀಪ ಸೂರ್ಯಕಾಂತ ಮಮದಾಪೂರ ಉಪ-ಪರಿಸರ ಅಧಿಕಾರಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಚಿಕ್ಕೋಡಿ ಇವರ ಸೂಚನೆಯ ಮೇರೆಗೆ ರೂ.೩೦,೦೦೦/-ಗಳ ಲಂಚದ ಹಣವನ್ನು ಫಿರ‍್ಯಾದಿಯಿಂದ ಸ್ವೀಕರಿಸುವ ಸಂದರ್ಭದಲ್ಲಿ ಬೆಳಗಾವಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದು, ಆಪಾದಿತರನ್ನು ಬಂಧಿಸಿ ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಮಾನವೀಯ ಮೌಲ್ಯಗಳ ಅಮೂಲ್ಯ ಗ್ರಂಥ ಭಗವದ್ಘೀತೆ: ಸಿಎಂ ಬೊಮ್ಮಾಯಿ

Related Articles

Back to top button