Kannada NewsKarnataka NewsLatest

*ಬೆಂಕಿ ದುರಂತದಲ್ಲಿ 14 ಜನರು ಸಜೀವ ದಹನ; ಇದೊಂದು ಕೆಟ್ಟ ಘಟನೆ; ಡಿಜಿ ಐಜಿಪಿ*

ಪ್ರಗತಿವಾಹಿನಿ ಸುದ್ದಿ; ಆನೇಕಲ್: ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಸಂಭವಿಸಿದ ಪಟಾಕಿ ಗೋಡೌನ್ ಬೆಂಕಿ ದುರಂತದಲ್ಲಿ 14 ಜನರು ಸಜೀವ ದಹನಗೊಂಡಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಿನ್ನೆ ಸಂಜೆ ಪಟಾಕಿ ಅನ್ ಲೋಡ್ ಮಾಡುತ್ತಿದ್ದಾಗ ಗೋಡೌನ್ ನಲ್ಲಿ ಅಗ್ನಿ ದುರಂತ ಸಂಭವಿಸಿದೆ. ಗೋಡೌನ್ ನಲ್ಲಿ 20 ಜನರು ಕೆಲಸ ಮಾಡುತ್ತಿದ್ದರು. 14 ಜನರು ಸಜೀವ ದಹನಗೊಂಡಿದ್ದಾರೆ. 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ಘಟನಾ ಸ್ಥಳದಲ್ಲಿ ಕುಟುಂಬದವರ ಆಕ್ರಂದನ ಮುಗಿಲುಮುಟ್ತಿದೆ. ಮೃತದೇಹದ ಗುರುತು ಸಿಗಲಾರದಷ್ಟು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಡಿಜಿ ಐಜಿಪಿ ಅಲೋಕ್ ಮೋಹನ್, ಇದೊಂದು ಕೆಟ್ಟ ಘಟನೆ. ಬೆಂಕಿ ದುರಂತದಲ್ಲಿ ಗೋಡೌನ್ ನಿಂದ ಹೊರಬರಲಾಗದೇ 14 ಜನರು ಸಾವನ್ನಪ್ಪಿದ್ದಾರೆ. ಉಳಿದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.


Related Articles

Back to top button