Kannada NewsLatest

ಆಡಳಿತ ವ್ಯವಸ್ಥೆ ಉತ್ತಮವಾಗಿದ್ದಾಗ ಅಭಿವೃದ್ಧಿಯ ಹಾದಿ ಸುಗಮ – ಸಚಿವೆ ಶಶಿಕಲಾ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ನಿಪ್ಪಾಣಿ ನಗರಸಭೆಗೆ ನೂತನ ಸಭಾಪತಿಯಾಗಿ ಅವಿರೋಧ ಆಯ್ಕೆಯಾದ ಭಾರತೀಯ ಜನತಾ ಪಕ್ಷದ ಸದ್ದಾಮ ನಗಾರ್ಜಿ ಅವರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದರಾದ  ಅಣ್ಣಾಸಾಹೇಬ ಜೊಲ್ಲೆ ಅವರು  ಹೂ ಗುಚ್ಛ ನೀಡಿ, ಅಭಿನಂದನೆ ಸಲ್ಲಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ನಗರಸಭೆ ಅನ್ನುವುದು ಪ್ರಜೆಗಳ ಹಾಗೂ ಚುನಾಯಿತ ಜನಪ್ರತಿನಿಧಿಗಳ ಸಂಪರ್ಕದ ಕೊಂಡಿಯಾಗಿದೆ. ಜನರ ಪ್ರತಿ ಸಮಸ್ಯೆಗೆ ಸಕಾರಾತ್ಮಕವಾಗಿ ಸ್ಪಂದಿಸಲು ನಗರಸಭೆಯ ಆಡಳಿತ ವ್ಯವಸ್ಥೆಯ ವ್ಯವಸ್ಥೆ ಸದಾ ಸಿದ್ಧವಾಗಿರಬೇಕು. ನೂತನವಾಗಿ ಆಯ್ಕೆಯಾದ ಸಭಾಪತಿಗಳ ಸಹಕಾರ ಹಾಗೂ ಸಲಹೆಯಂತೆ ಸರ್ವ ಸದಸ್ಯರು, ನಗರದ ಅಭಿವೃದ್ಧಿ ಪಣತೊಡಬೇಕು ಎಂದು ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಜಯವಂತ ಭಾಟಲೆ, ಉಪಾಧ್ಯಕ್ಷರಾದ ನೀತಾ ಬಾಗಡಿ, ಪೌರಾಯುಕ್ತರಾದ  ಮಹಾವೀರ ಬೋರಣ್ಣವರ, ನಗರಸಭೆ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button