Kannada NewsKarnataka NewsLatest

ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ಸರ್ಜನ್ ನಿಯೋಜನೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ನೀಡಿದ ಸೂಚನೆಯ ಮೇರೆಗೆ ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ವೈದ್ಯರನ್ನು ನಿಯೋಜಿಸಿ ಆದೇಶ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಸರ್ಜನ್ ಇಲ್ಲದಿರುವ ಸಂಗತಿ ಇಂದು (ಜು.19)   ನಡೆದ ಕೆಡಿಪಿ ಸಭೆಯಲ್ಲಿ ತಮ್ಮ ಗಮನಕ್ಕೆ‌ ಬಂದಾಗ ಕೂಡಲೇ ವೈದ್ಯರನ್ನು ನಿಯೋಜಿಸುವಂತೆ ಸಚಿವರು ತಿಳಿಸಿದ್ದರು. ಆ ಪ್ರಕಾರ ‌ಕೆಲವೇ ಗಂಟೆಗಳಲ್ಲಿ ಬೈಲಹೊಂಗಲ ಆಸ್ಪತ್ರೆಗೆ ವೈದ್ಯರನ್ನು ನಿಯೋಜಿಸಲಾಗಿದೆ.

Home add -Advt

ಜನರಲ್ ಸರ್ಜನ್ ಆಗಿರುವ ಡಾ.ರಾಜಶೇಖರ್ ಯರಜರ್ವಿ ಅವರನ್ನು ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ನಿಯೋಜಿಸಲಾಗಿದೆ. ನಿಯೋಜಿತ ಸ್ಥಳದಲ್ಲಿ ಕೂಡಲೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

KDP ಸಭೆಯಲ್ಲಿ ಏನಾಗಿತ್ತು? ಈ ಸುದ್ದಿ ಓದಿ –  ಬೆಳಗಾವಿ – ಸಾಂಬ್ರಾ ರಸ್ತೆ ಅಗಲೀಕರಣ ಯೋಜನೆಗೆ ಶೀಘ್ರ ಮಂಜೂರಾತಿ; KDP ಸಭೆಯಲ್ಲಿ ಶಾಸಕಿಯಿಂದ ತರಾಟೆಗೊಳಗಾದ ಸಚಿವ

ಬೈಲಹೊಂಗಲ: ಬೈಕ್ ಗೆ ಕಾರು ಡಿಕ್ಕಿ; ಬಾಲಕ ಸಾವು

Related Articles

Back to top button