Belagavi NewsBelgaum NewsElection NewsKannada NewsKarnataka NewsLatestPolitics

ಪ್ರಜ್ವಲ್ ಪ್ರಕರಣ​ ಕುರಿತು ಬಿಜೆಪಿಯ ಧೀಮಂತ ನಾಯಕರ​ ಮೌನವೇಕೆ?: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ​ಪ್ರಶ್ನೆ​ 

​ 

​ ​ಹುಬ್ಬಳ್ಳಿ ಘಟನೆಗೆ ತೋರಿದಷ್ಟೇ ಆಸಕ್ತಿಯನ್ನು ಜಗದೀಶ ಶೆಟ್ಟರ್ ಹಾಗೂ ಇತರರು ಇಲ್ಲೂ ತೋರಿಸಲಿ

ಸಂಸದೆ ಮಂಗಲಾ ಅಂಗಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಿ 

​ ಸಂ​ತ್ರಸ್ತೆಯರ ಪರ ಮೈತ್ರಿ ನಾಯಕರು ಮಾತಾಡಲಿ​ 

​ ಇಡೀ ದೇಶವೇ ತಲೆ ತಗ್ಗಿಸುವಂಥ ನೀಚ ಕೃತ್ಯ​ 

 ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ:* ಇಡೀ ದೇಶವೇ ತಲೆ ತಗ್ಗಿಸುವಂಥ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ನಾಯಕರು ಮೌನ ವಹಿಸಿರುವುದು ಏಕೆ? ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ​ಭಾರೀ ಆಸಕ್ತಿ ತೋರಿಸಿದ್ದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರೇ ​ಈ​ಗಲೂ ಸಂತ್ರಸ್ತ ಮಹಿಳೆಯರ ಪರ ಧ್ವನಿ ಎತ್ತಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸವಾಲು ಹಾಕಿದರು. 

ಗೃಹ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು,​ ಮಹಿಳೆಯರಿಗೆ ಎಲ್ಲೇ ಅನ್ಯಾಯವಾದರೂ ನಾವು ಖಂಡಿಸುತ್ತೇವೆ. ಅವರ ಪರವಾಗಿ ನಿಲ್ಲುತ್ತೇವೆ. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಅದರಲ್ಲಿ ರಾಜಕೀಯ ಬೆರೆಸಲು ನಾವು ಹೋಗುವುದಿಲ್ಲ. ಆದರೆ ಹುಬ್ಬಳ್ಳಿ ಪ್ರಕರಣದಲ್ಲಿ ಅತೀವ ಆಸಕ್ತಿ ತೋರಿಸಿದ್ದ ಬಿಜೆಪಿ ನಾಯಕರು ಈಗೇಕೆ ಮೌನವಾಗಿದ್ದಾರೆ. ಇಲ್ಲೂ ನೂರಾರು ಮಹಿಳೆಯರಿಗೆ ಅನ್ಯಾಯವಾಗಿದೆಯಲ್ಲವೇ? ಈಗಲೂ ಸಂಸದೆ ಮಂಗಲಾ ಅಂಗಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಿ. ಜಗದೀಶ ಶೆಟ್ಟರ್ ಅಷ್ಟೇ ಆಸಕ್ತಿಯಿಂದ ಹೇಳಿಕೆಗಳನ್ನು ನೀಡಲಿ ಎಂದು ಆಗ್ರಹಿಸಿದರು.

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಏನು‌ ಹೇಳ್ತೀರಾ ನಾರಿ ಶಕ್ತಿ, ನಾರಿ‌ ಸಮ್ಮಾನ್, ಬೇಟಿ ಬಚ್ಚಾವ್, ಬೇಟಿ ಪಡಾವ್ ಅಂತ ಹೇಳುವ ಬಿಜೆಪಿಗರು, ಈಗ ಯಾಕೆ ಮೌನವಾಗಿದ್ದಾರೆ.​ ಮಾತು ಆಡಿದರೆ ಕರ್ನಾಟಕ ಸರ್ಕಾರವನ್ನು ಟೀಕಿಸುವ ಮೋದಿಜೀ ಅವರ​ ಈಗಿನ ನಿಲುವೇನು?​ ಇಲ್ಲಿನ ಸಂತ್ರಸ್ತ ಮಹಿಳೆಯರ ಮಾಂಗಲ್ಯದ ಕತೆಯೇನು? ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾಗಿ ಪ್ರಶ್ನೆ ಕೇಳ್ತಾ ಇದ್ದೀನಿ ಎಂದು ಹೇಳಿದರು. 

 *ಕಾನೂನು ಚೌಕಟ್ಟಿನಡಿ ಕ್ರಮ* 

ವಿದೇಶದಿಂದ, ಹೊರ ರಾಜ್ಯಗಳಿಂದ ಫೋನ್ ಕಾಲ್ ಗಳು ಬರುತ್ತಿವೆ.​ ಇಂತಹ ಪ್ರಕರಣ ನಡೆದಿದ್ದು ನಿಜವೇ ಎಂದು ಪ್ರಶ್ನಿಸುತ್ತಿದ್ದಾರೆ. ಸರಕಾರ ಏನು ಕ್ರಮ ಕೈಗೊಳ್ಳಲಿದೆ ಎಂದು ಪ್ರಶ್ನಿಸುತ್ತಿದ್ದಾರೆ.​ಪ್ರಕರಣವನ್ನು ರಾಜ್ಯ ಸರ್ಕಾರ ಈಗಾಲೇ ಎಸ್ ಐಟಿ ತನಿಖೆಗೆ ವಹಿಸಿದ್ದು, ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. 

ಬಿಜೆಪಿಯ ಮಹಿಳಾ ಮಣಿಗಳು ಎಲ್ಲಿದ್ದಾರೆ. ಸಂಸದೆ ಮಂಗಲಾ ಅಂಗಡಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಆಗಬೇಕು, ನೇಹಾ ಹಿರೇಮಠ ವಿಷಯದಲ್ಲಿ ಮಾತಾಡಿದಂತೆ ಜಗದೀಶ್ ಶೆಟ್ಟರ್ ಅವರು ಮಾತಾಡಬೇಕು. 16 ವರ್ಷದಿಂದ 50, 60 ವರ್ಷದ ಮಹಿಳೆಯರು ಪ್ರಜ್ವಲ್ ರೇವಣ್ಣ ಅವರಿಂದ ನೊಂದಿದ್ದಾರೆ‌. ಮಹಿಳೆಯರ ಪರ ಮೈತ್ರಿ ನಾಯಕರು ನಿಲ್ಲಲಿ ಎಂದು ಹೇಳಿದರು. 

ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ, ಹಿರಿಯ ಮುಖಂಡ ಎ.ಟಿ.ರಾಮಸ್ವಾಮಿ, ದೇವರಾಜ್ ಗೌಡ ಎಂಬುವರು, ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಮೈಸೂರು ಪ್ರವಾಸದಲ್ಲಿದ್ದ ಅಮಿತ್ ಷಾ ಅವರ ಗಮನಕ್ಕೆ​ ಆಗಲೇ ತಂದಿದ್ದರು. ಇಂಥ ವಿಷಯ ಗೊತ್ತಿದ್ದರೂ ಮೈತ್ರಿ ನಾಯಕರು ಪ್ರಜ್ವಲ್ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡಿದ್ದು ಎಷ್ಟು ಸರಿ. ಇದಕ್ಕೆ ಬಿಜೆಪಿ ನಾಯಕರು ಉತ್ತರಿಸುವರೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ​ಪ್ರಝ್ವಲ್ ರೇವಣ್ಣ ಪ್ರಕರಣದ ಕುರಿತು ಬಿಜೆಪಿ ನಾಯಕರಿಗೆ ಮೊದಲೇ ಅರಿವಿತ್ತು ಎಂದೂ ಸಚಿವರು ಹೇಳಿದರು.

ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿರುವ ಬಿಜೆಪಿ ನಾಯಕರು,  ಈಗ ಯಾಕೆ ಜಾಣ ಮೌನವಾಗಿದ್ದಾರೆ. ಮೊನ್ನೆ ಮಾಜಿ ಶಾಸಕರೊಬ್ಬರೂ ನನ್ನ ಬಗ್ಗೆ ತುಚ್ಛವಾಗಿ ಮಾತಾಡುವಾಗ ವೇದಿಕೆಯಲ್ಲಿದ್ದ ಸಂಸದೆ ಮಂಗಲಾ ಅಂಗಡಿ, ಜಗದೀಶ್ ಶೆಟ್ಟರ್ ನಕ್ಕರು ಹೊರತು ಏನು ಮಾತಾಡ್ಲಿಲ್ಲ. ಸಂಜಯ್ ಪಾಟೀಲ್ ಗೆ ಕನಿಷ್ಠ ಬುದ್ದಿವಾದ ಹೇಳಲಿಲ್ಲ ಎಂದು ಸಚಿವರು ಆರೋಪಿಸಿದರು. 

ಉಡುಪಿ ಹಾಸ್ಟೆಲ್ ನಲ್ಲಿ ಕ್ಯಾಮೆರಾ ಇಟ್ಟ ವಿಷಯ​ವನ್ನು ಬಿಜೆಪಿಯವರು ರಾಜಕರಣ‌ಗೊಳಿಸಿದ್ರು,​ ರಾಷ್ಟ್ರೀಯ ಮಹಿಳಾ ಆಯೋಗದವರು ಓಡೋಡಿ ಬಂದರು. ಈಗ ಸಾವಿರಾರು ಮಹಿಳೆಯರ ಮಾನ ಹರಾಜಾದ್ರು ಯಾರು ಏ​ನೂ ಮಾತಾಡುತ್ತಿಲ್ಲ. ಅಶೋಕ್, ವಿಜಯೇಂದ್ರ ಅವರೇ ಈಗ ಏನು ಹೇಳ್ತೀರಾ, ಶೋಭಾ ಕರಂದ್ಲಾಜೆ, ಸ್ಮತಿ ಇರಾನಿ ಅವರು ಯಾಕೆ ಏನು ಹೇಳ್ತಿಲ್ಲ. ಮಂಡ್ಯ ಸೊಸೆ ಸುಮಲತಾ ಏನ್ ಮಾಡ್ತಿದ್ದಾರೆ ಎಂದು​ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದರು. 

ಸರಕಾರ ನೊಂದ ಮಹಿಳೆಯರ ಪರವಾಗಿ ನಿಲ್ಲಲಿದೆ. ಅವರ ರಕ್ಷಣೆ ಮಾಡಲಿದೆ. ಪ್ರಕರಣದ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ. ಮಹಿಳೆಯರ ಜೀವಂತ ಸಮಾಧಿಯಾಗಿದೆ. ಸಮಾಜದ ಸ್ವಾಸ್ಥ್ಯ ಕೆಡಿಸುವ ​ಪ್ರಜ್ವಲ್ ಪ್ರಕರಣದ ವಿಡೀಯೋಗಳನ್ನು ಯಾರೂ ಫಾರ್ ವರ್ಡ್ ಮಾಡಬಾರದು ಎಂದು ಸಚಿವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಚಿವ ಡಾ.ಎಂ.ಸಿ.ಸುಧಾಕರ್, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ವಿನಯ್ ನಾವಲಗಟ್ಟಿ ಉಪಸ್ಥಿತರಿದ್ದರು.

​ 

​ 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button