Kannada NewsKarnataka NewsLatest

*ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪರ ಮಹಿಳೆ ಜೊತೆ ಪತಿಯ ಅಕ್ರಮ ಸಂಬಂಧಕ್ಕೆ ಮನನೊಂದ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸುಬ್ರಹ್ಮಣ್ಯ ನಗರ ನಿವಸದಲ್ಲಿ ನಡೆದಿದೆ.

ರಾಧಾ (33) ಮೃತ ಮಹಿಳೆ. ರಾಧಾ 8 ವರ್ಷಗಳ ಹಿಂದೆ ರಾಮಾಂಜಿನಯ್ಯ ಎಂಬುವವರನ್ನು ವಿವಾಹವಾಗಿದ್ದರು. ಆದರೆ ಪತಿ ರಾಮಾಂಜಿನಯ್ಯ ಮತ್ತೊಂದು ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಹಲವು ಬಾರಿ ಪತಿಗೆ ಬಿದ್ಧಿ ಹೇಳಿದರೂ ತಿದ್ದಿಕೊಂಡಿರಲಿಲ್ಲ.

ಪತಿಯ ನಡತೆಗೆ ಮನನೊಂದ ರಾಧಾ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button