Belagavi NewsBelgaum NewsKarnataka News

*ಕುಡುಕ ಪತಿಯ ಹಿಂಸೆಗೆ ನೊಂದು ಇಬ್ಬರು ಮಕ್ಕಳೊಂದಿಗೆ ಪತ್ನಿ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ: ಕುಡುಕ ಪತಿಯ ಹಿಂಸೆ, ಕಿರುಕುಳಕ್ಕೆ ನೊಂದ ಪತ್ನಿ, ತನ್ನ ಇಬ್ಬರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ.

ಪೈ ಅಶೋಕ್ ಡಾಲಿ ಕುಡಿದುಬಂದು ಪ್ರತಿದಿನ ಕಿರುಕುಳ ನೀಡುತ್ತಿದ್ದ. ಇದರಿಂದ ಮನನೊಂದ ಪತ್ನಿ ತನ್ನ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿದ್ದಾರೆ. ತಾಯಿ ಹಾಗೂ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸವನ್ನಪ್ಪಿದ್ದಾರೆ. ಇನ್ನೋರ್ವ ಮಗಳು ಅನುಷಾ ಡಾಲಿಯನ್ನು ರಕ್ಷಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt

Related Articles

Back to top button