Latest

ಬೆಳಗಾವಿ ಅಧಿವೇಶನ ದಿನಾಂಕ ನಿಗದಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.  ಶ್ರೀಗಂಧ ನೀತಿ-2022ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಸುಧಾಕರ್, ಶ್ರೀಗಂಧ ನೀತಿ-2022ಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಲಾಗಿದೆ. ರೈತರು ತಮ್ಮ ಖಾಸಗಿ ಜಮೀನಿನಲ್ಲಿ ಶ್ರೀಗಂಧ ಬೆಳೆದು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಮುಕ್ತ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

Home add -Advt

ಡಿಸೆಂಬರ್ 19ರಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶ ಆರಂಭವಾಗಲಿದೆ.  ಡಿಸೆಂಬರ್ 19ರಿಂದ 29ರವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಹೇಳಿದರು.

https://pragati.taskdun.com/gumbaz-stile-bus-standmp-pratap-simhas-a-ramadasreaction/

Related Articles

Back to top button