Kannada NewsKarnataka NewsLatest

*ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ: ಪತಿ ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

Home add -Advt

ಮಂಡ್ಯದ ಮದ್ದೂರು ತಾಲೂಕಿನ ಹೆಮ್ಮನಹಳ್ಳಿಯಲ್ಲಿ ಈ ಘಟನೆ ನಡೆದಿದೆ. 26 ವರ್ಷದ ಹರ್ಷಿತಾ ಮೃತ ಮಹಿಳೆ. ನಂದೀಶ್ ಎಂಬುವವರ ಜೊತೆ ಹರ್ಷಿತಾಳನ್ನು ವಿವಾಹಮಾಡಿ ಕೊಡಲಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಎರಡು ವರ್ಷಗಳಿಂದ ಪತಿ ನಂದೀಶ್, ಹರ್ಷಿತಾಳಿಗೆ ಕಿರುಕುಳ ನೀಡುತ್ತಿದ್ದ. ಹಿರಿಯರೆಲ್ಲ ಸೇರಿ ಪಂಚಾಯಿತಿ ಮಾಡಿ ರಾಜಿ ಮಾಡಿಸಿದ್ದರು. ಈಗ ಹರ್ಷಿತಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಪತಿ ಹಾಗೂ ಕುಟುಂಬದವರು ನಾಪತ್ತೆಯಾಗಿದ್ದಾರೆ.

ಮಗಳು ಹರ್ಷಿತಾಳನ್ನು ಪತಿ ಹಾಗೂ ಕುಟುಂಬದವರು ಕೊಂದು ನೇಣು ಹಾಕಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಮನೆ ಮುಂದೆ ಶವವಿಟ್ಟು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button