Latest

ನವ ವಿವಾಹಿತೆ ದಿಢೀರ್ ಸಾವು; ವೈದ್ಯರ ನಿರ್ಲಕ್ಷ್ಯಕ್ಕೆ ಕುಟುಂಬದವರ ಆಕ್ರೋಶ

ಪ್ರಗತಿವಾಹಿನಿ ಸುದ್ದಿ; ಕಾರವಾರ: 19 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನವ ವಿವಾಹಿತೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ನಡೆದಿದೆ.

ಸನಾ ಮಾಂಜ್ರೇಕರ್ (24) 19 ದಿನಗಳ ಹಿಂದೆ ಸ್ವಪ್ನಿಲ್ ಮಾಂಜ್ರೇಕರ್ ಎಂಬುವವರನ್ನು ವಿವಾಹವಾಗಿದ್ದಳು. 8 ದಿನಗಳ ಹಿಂದಷ್ಟೇ ಜ್ವರದಿಂದ ಗುಣಮುಖಳಾಗಿದ್ದ ಸನಾಳಿಗೆ ನಿನ್ನೆ ಮತ್ತೆ ಜ್ವರ ಕಾಣಿಸಿಕೊಂಡಿದೆ. ತೀವ್ರ ಜ್ವರ ಹಿನ್ನೆಲೆಯಲ್ಲಿ ಸನಾಳನ್ನು ಕಾರವಾರದ ಕಾಜುಭಾಗ್ ನ ಸಾವಂತ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಮಾಡಿದ ವೈದ್ಯರು 4 ಇಂಜಕ್ಷನ್ ನೀಡಿದ್ದಾರೆ. ಇದರಿಂದ ಸನಾ ಇನ್ನಷ್ಟು ಅಸ್ವಸ್ಥಗೊಂಡಿದ್ದಳು. ತಕ್ಷಣ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಮುಂಜಾನೆ 4 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಸನಾ ಕೊನೆಯುಸಿರೆಳೆದಿದ್ದಾಳೆ.

ಸನಾ ಸಾವಿಗೆ ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷವೇ ಕಾರಣ. ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕುಟುಂಬಸ್ಥರು ಕಾರವಾರ ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಭೀಕರ ರಸ್ತೆ ಅಪಘಾತ; ಅಯೋಧ್ಯೆಗೆ ತೆರಳುತ್ತಿದ್ದ ರಾಜ್ಯದ 7 ಯಾತ್ರಿಕರ ದುರ್ಮರಣ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button