Kannada NewsKarnataka NewsLatest

*ಕರ್ತವ್ಯದ ವೇಳೆ ನಿದ್ದೆಗೆ ಜಾರಿದ ಪೊಲೀಸರು; ಇಬ್ಬರು ಕಾನ್ಸ್ ಟೇಬಲ್ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ತವ್ಯ ನಿರ್ವಹಣೆ ವೇಳೆ ನಿದ್ದೆಗೆ ಜಾರಿದ್ದ ಇಬ್ಬರು ಕಾನ್ಸ್ ಟೇಬಲ್ ಗಳನ್ನು ಅಮಾನತುಗೊಳಿಸಿ ಆದೇಶ ನೀಡಲಾಗಿದೆ.

ಬೆಂಗಳೂರಿನ ವೈಟ್ ಫೀಲ್ಡ್ ಡಿಸಿಪಿ ಎಸ್.ಗಿರೀಶ್ ಇಬ್ಬರು ಕಾನ್ಸ್ ಟೇಬಲ್ ಗಳನ್ನು ಅಮನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಮಹದೇವಪುರ ಪೊಲೀಸ್ ಠಾಣೆ ಕಾನ್ಸ್ ಟೇಬಲ್ ಈರಪ್ಪ ಉಂಡು ಹಾಗೂ ಹೆಡ್ ಕಾನ್ಸ್ ಟೇಬಲ್ ಎ.ಎನ್.ಜಯರಾಮ್ ಅಮಾನತುಗೊಂಡವರು.

ಇಬ್ಬರು ಕಾನ್ಸ್ ಟೆಬಲ್ ಗಳು ಡಿಸಿಪಿ ಗಸ್ತು ವೇಳೆಯಲ್ಲಿ ಮಲಗಿ ನಿದ್ದೆಗೆ ಜಾರಿದ್ದರು. ಈ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.


Home add -Advt

Related Articles

Back to top button