Kannada NewsKarnataka NewsLatest

*BREAKING: ಇಬ್ಬರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ತಾಯಿ*

ಪ್ರಗತಿವಾಹಿನಿ ಸುದ್ದಿ: ಇಬ್ಬರು ಮಕ್ಕಳನ್ನು ಹತ್ಯೆಗೈದು ತಾಯಿ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಬಾಗಲಗುಂಟೆಯ ಭುವನೇಶ್ವರಿ ನಗರದಲ್ಲಿ ಮಹಿಳೆಯೊಬ್ಬರು ತನ್ನ 5 ವರ್ಷದ ಮಗಳು ಹಾಗೂ ಒಂದೂವರೆ ವರ್ಷದ ಮಗನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಾಯಚೂರು ಮೂಲದ ವಿಜಯಲಕ್ಷ್ಮೀ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡವಳು.

Home add -Advt

ಮಹಿಳೆಯ ಸಹೋದರಿ ಮನೆಗೆ ಬಂದು ನೋಡಿದಾಗಲೇ ಘಟನೆ ಬೆಳಕಿಗೆ ಬಂದಿದೆ. ವಿಜಯಲಕ್ಷ್ಮೀ ಮಾಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Related Articles

Back to top button