Latest
ವಿಕಲಚೇತನನ ಅಹವಾಲು ಆಲಿಸಿದ ಸಿಎಂ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಅಧಿವೇಶನದ ಹಿನ್ನೆಲೆಯಲ್ಲಿ ವಿಟಿಯು ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳುವ ಸಂದರ್ಭದಲ್ಲಿ ತಮ್ಮನ್ನು ಭೇಟಿಯಾದ ವಿಕಲಚೇತನ ವ್ಯಕ್ತಿಯೊಬ್ಬನ ಅಹವಾಲು ಆಲಿಸಿದರು.




