*ಬಸ್ ನಿಲ್ದಾಣದಲ್ಲೇ ಮಹಿಳೆಯ ಸರ ಕಳ್ಳತನ: ಕಣ್ಣಿರಿಟ್ಟ ಮಹಿಳೆ, ಪೊಲೀಸರಿಂದ ತಲಾಶ್*

ಪ್ರಗತಿವಾಹಿನಿ ಸುದ್ದಿ,ಬೆಳಗಾವಿ: ಬೈಲಹೊಂಗಲ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಸುಮಾರು 5.50 ಲಕ್ಷ ರೂ. ಮೌಲ್ಯದ 3.5 ತೊಲಿ ಬಂಗಾರದ ಆಭರಣ ಕಳ್ಳತನವಾಗಿರುವ ಘಟನೆ ನಡೆದಿದೆ. ತಾಲೂಕಿನ ನನಗುಂಡಿಕೊಪ್ಪ ಗ್ರಾಮದ ಮಂಗಲಾ ಬಸಯ್ಯ ದೇಸಾಯಿ (35) ಬಂಗಾರ ಕಳೆದುಕೊಂಡವರು. ಅವರು ನನಗುಂಡಿಕೊಪ್ಪದಿಂದ ಬೈಲಹೊಂಗಲ ಕೇಂದ್ರ ಬಸ್ ನಿಲ್ದಾಣಕ್ಕೆ ಬಂದು ಇಳಿದು, ಬಳಿಕ ಮರಕುಂಬಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಲು ಬೈಲಹೊಂಗಲ–ಯರಗಟ್ಟಿ ಬಸ್ ಹತ್ತಿದ್ದರು. ಬಸ್ ಹತ್ತಿದ ಕೆಲವೇ ಕ್ಷಣಗಳಲ್ಲಿ ಕೊರಳನ್ನು ಗಮನಿಸಿದಾಗ ಬಂಗಾರದ ಆಭರಣ ಕಾಣೆಯಾಗಿರುವುದು … Continue reading *ಬಸ್ ನಿಲ್ದಾಣದಲ್ಲೇ ಮಹಿಳೆಯ ಸರ ಕಳ್ಳತನ: ಕಣ್ಣಿರಿಟ್ಟ ಮಹಿಳೆ, ಪೊಲೀಸರಿಂದ ತಲಾಶ್*