Kannada NewsKarnataka NewsLatest

*ತೆಂಗಿನಗೊನೆ ಬಿದ್ದು ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ; ಹಾಸನ: ಬಾಲಕನೊಬ್ಬ ತೆಂಗಿನಕಾಯಿ ಗೊನೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟನದ ಶ್ರವಣಬೆಳಗೊಳ ಹೋಬಳಿಯ ಬಿ.ಚೋಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

Home add -Advt

ಪ್ರಜ್ವಲ್ (16) ಮೃತ ಬಾಲಕ. ಶ್ರವಣಬೆಳಗೊಳದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕ, ಮಳೆಯಿಂದಾಗಿ ತೋಟದಲ್ಲಿ ಬಿದ್ದಿದ್ದ ತೆಂಗಿನ ಕಾಯಿ ಎತ್ತುತ್ತಿದ್ದ. ಈ ವೇಳೆ ತೆಂಗಿನ ಮರದಿಂದ ಗೊನೆಯೊಂದು ಬಾಲಕನ ತಲೆಯ ಮೇಲೆ ಬಿದ್ದಿದ್ದು, ಬಾಲಕ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಆದರೆ ಆಸ್ಪತ್ರೆ ಮಾರ್ಗ ಮಧ್ಯೆಯೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಶ್ರವಣಬೆಳಗೊಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button