Latest

ಬೆಳ್ಳಿ ಗೆಜ್ಜೆಗಾಗಿ ಮಹಿಳೆಯರ ಸರಣಿ ಹತ್ಯೆ

ಪ್ರಗತಿವಾಹಿನಿ ಸುದ್ದಿ; ಜೈಪುರ: ಕೆಲ ದಿನಗಳ ಹಿಂದೆ ಮಹಿಳೆಯೊಬ್ಬರ ಶವ ಕಾಲು ಕತ್ತರಿಸಿದ ರೀತಿಯಲ್ಲಿ ಜೈಪುರದಲ್ಲಿ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಇದೀಗ ರಾಜಸ್ಥಾನದ ರಾಜ್ ಸಮಂದ್ ಜಿಲ್ಲೆಯ ಚಾರ್ಭುಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 45 ವರ್ಷದ ಮಹಿಳೆಯೊಬ್ಬರ ಮೃತದೇಹ ಪಾದ ಕತ್ತರಿಸಿದ ರೀತಿಯಲ್ಲಿ ಪತ್ತೆಯಾಗಿದೆ.

ಕುಂಕುಬಾಯಿ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಗಂಡನಿಗೆ ತಿಂಡಿ ಕೊಡಲೆಂದು ಹೊಲಕ್ಕೆ ಹೋಗಿದ್ದ ಮಹಿಳೆಯನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಪತ್ನಿ ಎಷ್ಟುಹೊತ್ತಾದರೂ ಬಾರದಿದ್ದಾಗ ಹೊಲದಿಂದ ಮನೆಗೆ ಬಂದ ಪತಿ ವಿಚಾರಿಸಿದಾಗ ಆಕೆ ಬೆಳಿಗ್ಗೆಯೇ ಹೊಲಕ್ಕೆ ಹೋಗಿದ್ದಾಳೆ ಎಂದಿದ್ದಾರೆ. ಹೊಲದಲ್ಲಿ ಹುಡುಕಾಡಿದಾಗ ಮಹಿಳೆಯ ಕಾಲು ಕತ್ತರಿಸಿದ ರೀತಿಯಲ್ಲಿ ಶವ ಪತ್ತೆಯಾಗಿದೆ.

ಬೆಳ್ಳಿ ಗೆಜ್ಜೆಗಳಿಗಾಗಿ ಮಹಿಳೆಯರ ಸರಣಿ ಹತ್ಯೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದು, ಶೀಘ್ರವಾಗಿ ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬೆಳಗಾವಿ: ಆರೋಗ್ಯ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಗೋಲ್ ಮಾಲ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button