
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಕರ್ಲೆ ಗ್ರಾಮದಲ್ಲಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ 15 ಲಕ್ಷ ರೂ ಅನುದಾನದಲ್ಲಿ ರಸ್ತೆಯ ಕಾಮಗಾರಿಗಳಿಗೆ ಸ್ಥಳೀಯ ಜನಪ್ರತಿನಿಧಿಗಳು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮೃಣಾಲ ಹೆಬ್ಬಾಳಕರ್, ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಶಂಕರ ಗೋವೆಕರ್, ವಿನಾಯಕ ಪಾಟೀಲ, ಅಮೃತ್ ಕೇಮನಾಳ್ಕರ್, ಸಾಂಬ್ರೇಕರ್ ಉಪಸ್ಥಿತರಿದ್ದರು.