Latest

ವೈ.ಎಸ್.ವಿ.ದತ್ತಾ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಶಾಸಕ, ಜೆಡಿಎಸ್ ಮುಖಂಡ ವೈ.ಎಸ್.ವಿ ದತ್ತಾ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ. ತಾವು ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ ಎಂದು ಮಾತನಾಡಿರುವ ಆಡಿಯೋ ಒಂದು ಭಾರಿ ವೈರಲ್ ಆಗಿದೆ.

ಕೆಲ ದಿನಗಳ ಹಿಂದೆ ವೈ.ಎಸ್.ವಿ.ದತ್ತಾ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಆಗಿನಿಂದಲೂ ದತ್ತಾ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿರುವ ಸಾಧ್ಯತೆ ಇದೆ ಎಂದೇ ಹೇಳಲಾಗಿತ್ತು.

ಇದೀಗ ಸಿದ್ದರಾಮಣ್ಣ ಕರೆಯುತ್ತಿದ್ದಾರೆ. ನಾನು ಕಾಂಗ್ರೆಸ್ ಸೇರುತ್ತೇನೆ. ಮಂತ್ರಿಯಾಗುವ ಅರ್ಹತೆಯೂ ನನಗಿದೆ ಎಂದಿದ್ದಾರೆ. ಅಲ್ಲದೇ ನಾನು ಕೊಟ್ಟ ಚೆಕ್ ಮುಂದಿನ ತಿಂಗಳು ಹಾಕೊಳ್ಳಿ. ನಾನು ನೆಕ್ಸ್ಟ್ ಮಂಥ್ ಕಾಂಗ್ರೆಸ್ ಸೇರುತ್ತೇನೆ. ನಮ್ಮ ಊರಿನವರೇ ಆಗಿದ್ದರಿಂದ ರಿಕ್ವೆಸ್ಟ್ ಮಾಡುತ್ತಿದ್ದೇನೆ ಎಂದು ಮಾತನಾಡುತ್ತಿರುವ ಆಡಿಯೋ ವೈರಲ್ ಆಗಿದೆ.

ಇನ್ನು ಆಡಿಯೋ ವೈರಲ್ ಬಗ್ಗೆ ಪ್ರತಿಕ್ಕ್ರಿಯಿಸಿರುವ ವೈ.ಎಸ್.ವಿ ದತ್ತಾ, ಕಾಂಗ್ರೆಸ್ ನಾಯಕರು ಆಹ್ವಾನಿಸಿದ್ದಾರೆ. ಆದರೆ ಇನ್ನೂ ನಿರ್ಧಾರ ಮಾಡಿಲ್ಲ. ಕ್ಷೇತ್ರದ ಜನರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಮಾಡುತ್ತೇನೆ ಎಂದಿದ್ದಾರೆ.

ಇತ್ತೀಚೆಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಇದರ ಬೆನ್ನಲ್ಲೇ ಇದೀಗ ವೈ.ಎಸ್.ವಿ.ದತ್ತಾ ಕೂಡ ತೆನೆ ಇಳಿಸಲು ಸಿದ್ಧತೆ ನಡೆಸಿದ್ದು, ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ.

ರಾಜನಾಥ್ ಸಿಂಗ್ ಭೇಟಿಯಾದ ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button