Latest

ಪ್ರಯಾಣಿಕರ ಮೇಲೆ ಹರಿದ ಲಾರಿ; ಬಾಲಕಿ ದುರಂತ ಅಂತ್ಯ

ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಸಾರಿಗೆ ಮುಷ್ಕರದ ನಡುವೆ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಸಿಮೆಟ್ ಲಾರಿ ಹರಿದು ಬಾಲಕಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಐದು ಜನರ ಮೇಲೆ ವೇಗವಾಗಿ ಬಂದ ಸಿಮೆಟ್ ಲಾರಿ ಹರಿದಿದೆ. ಪರಿಣಾಮ ಬಾಲಕಿ ದೇಹ ಛಿದ್ರ ಛಿದ್ರಗೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

Related Articles

ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗುರುಮಿಠಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

]

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button