Kannada NewsKarnataka NewsLatest

*ಮತದಾನದ ವೇಳೆ ಮಾರಾಮಾರಿ; ಮೂವರಿಗೆ ಗಾಯ; ಓರ್ವನ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಮತದಾನದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭೆ ಉಪಚುನಾನವಣೆ ವೇಳೆ ನಡೆದಿದೆ.

ಇಂದು ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಈ ವೇಳೆ ಬಾದ್ಯಾಪುರ ಗ್ರಾಮದ ಮತಗಟ್ಟೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮತದಾನಕ್ಕಾಗಿ ನಾ ಮುಂದು ತಾಮುಂದು ಎಂದು ಗಲಾಟೆ ನಡೆದು ನೂಕಾಟ ತಳ್ಳಾಟ ನಡೆದಿದೆ. ಕಾರ್ಯಕರ್ತರ ನಡುವಿನ ಗಲಾಟೆ ವಿಕೋಪಕ್ಕೆ ತಿರುಗಿ ಕೈಕೈ ಮಿಲಾಯಿಸಿಕೊಂಡಿದ್ದು, ಕಲ್ಲುತೂರಾಟ ನಡೆದಿದೆ.

ಈ ವೇಳೆ ಮತದಾನಕ್ಕೆಂದು ನಿಂತಿದ್ದ ಅಮಾಯಕರ ಮೇಲೆ ಕಲ್ಲುಗಳು ಬಿದ್ದಿದ್ದು, ಮೂವರು ಗಾಯಗೊಂಡಿದ್ದಾರೆ. ಓರ್ವ ವ್ಯಕ್ತಿಯ ತಲೆಯ ಭಾಗಕ್ಕೆ ಕಲ್ಲೇಟು ಬಿದ್ದ ಪರಿಣಾಮ ತಲೆಯಿಂದ ರಕ್ತ ಸುರಿಯುತ್ತಿದ್ದು, ಆತನ ಸ್ಥಿತಿ ಗಂಭೀರವಾಗಿದೆ.

Home add -Advt

ಸ್ಥಳದಲ್ಲಿದ್ದ ಪೊಲೀಸರು ಉದ್ರಿಕ್ತರನ್ನು ಚದುರಿಸಲು ಲಘುಲಾಠಿ ಪ್ರಹಾರ ನಡೆಸಿದ್ದಾರೆ ಎಂದು ತಿಳಿದುಬಂದಿದೆ.


Related Articles

Back to top button