Kannada NewsKarnataka NewsLatest

*BREAKING NEWS: ರೈಲು ನಿಲ್ದಾಣದಲ್ಲಿ ಅಗ್ನಿ ಅವಘಡ; ಹೊತ್ತಿ ಉರಿದ ಎರಡು ಕಂಟೇನರ್*

ಪ್ರಗತಿವಾಹಿನಿ ಸುದ್ದಿ: ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿ 2 ಕಂಟೇನರ್ ಹೊತ್ತಿ ಉರಿದ ಘಟನೆ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಲ್ಲಿ ನಡೆದಿದೆ.

ಅಡುಗೆ ಮಾಡಲು ನಿರ್ಮಿಸಿದ್ದ ಕಂಟೇನರ್ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಒಂದು ಬೋಗಿಯಲ್ಲಿ ಕ್ಯಾಂಟೀನ್ ನಡೆಸಲಾಗುತ್ತಿತ್ತು. ಮತ್ತೊಂದು ಬೋಗಿಯಲ್ಲಿ ದಿನಸಿ, ತರಕಾರಿ ಸ್ಟೋರ್ ಮಾಡಿ ಇಡಲಾಗಿತ್ತು. ತರಕಾರಿ-ಧಾನ್ಯ ಸ್ಟೋರ್ ಮಾಡಿದ್ದ ಬೋಗಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ನೋಡನೋಡುತ್ತಿದ್ದಂತೆ ಎರಡು ಬೋಗಿಗಳು ಹೊತ್ತಿ ಉರಿದಿವೆ. ಯಶವಂತಪುರ ರೈಲು ನಿಲ್ದಾಣದ ಪ್ಲಾಟ್ ಫಾರಂ 6ರಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Related Articles

Back to top button