Kannada NewsKarnataka NewsLatest
*BREAKING: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಆರೋಪಿಸಿದ್ದ ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಇದೇ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ.
ಧರ್ಮಸ್ಥಳದಲ್ಲಿ ಮಾತನಾಡಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಈಗ ಒಂದೊಂದೇ ಸತ್ಯಗಳು ಹೊರ ಬರುತ್ತಿವೆ. ಎಲ್ಲಾ ಆರೋಪಗಳು ತೊಳೆದು ಹೋದಂತಾಗಿದೆ ಎಂದು ತಿಳಿಸಿದ್ದಾರೆ.
ಇದರ ಬಗ್ಗೆ ನಾನು ಈಗೇನೂ ಮಾತನಾಡುವುದಿಲ್ಲ. ತನಿಖೆಯಿಂದ ಎಲ್ಲಾ ವಿಚಾರಗಳು ಗೊತ್ತಾಗಲಿವೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಹೀಗೇಯೇ ಇರಲಿ ಎಂದು ತಿಳಿಸಿದ್ದಾರೆ.




