Kannada NewsKarnataka NewsNationalPolitics
*ಕೆಪಿಸಿಸಿ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಯುವ ಕಾಂಗ್ರೆಸ್ ನಿನ್ನೆ ಹಲವು ಮಂದಿ ಪದಾಧಿಕಾರಿಗಳನ್ನು ಸ್ಥಾನದಿಂದ ಕಿತ್ತು ಹಾಕಿತ್ತು. ಇಂದು ಅದೇ ವಿಚಾರಕ್ಕೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ನಡುವೆ ಗಲಾಟೆ ನಡೆದಿದ್ದು, ಅದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.
ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವೆಯೇ ಮಾರಾಮಾರಿ ನಡೆದಿರುವ ಘಟನೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದಿದೆ.
NEET ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಪ್ರತಿಭಟನೆ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಮತ್ತು ಅಧ್ಯಕ್ಷ ಮಂಜುನಾಥ್ ಗೌಡ ಬೆಂಬಲಿಗರು ಪರಸ್ಪರ ಬಡಿದಾಡಿಕೊಂಡಿದ್ದಾರೆ.



