Latest

ಲಾಕ್ ಡೌನ್ ; ಹಲವು ಮಹತ್ವದ ಮಾಹಿತಿ ನೀಡಿದ ಸಿಎಂ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಮತ್ತೆ ಒಂದು ವಾರಕಾಲ ವಿಸ್ತರಣೆಯಾಗುವುದು ಬಹುತೇಕ ಖಚಿತವಾಗಿದೆ.

ಈ ಬಗ್ಗೆ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಕಂಪ್ಲೀಟ್ ನಿಯಂತ್ರಣಕ್ಕೆ ಬಂದಿಲ್ಲ. ಈ ನಿಟ್ಟಿನಲ್ಲಿ ಲಾಕ್ ಡೌನ್ ವಿಸ್ತರಣೆ, ಸಡಿಲ ಮಾಡುವ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಯಾವ ರೀತಿ ಬಿಗಿ ಕ್ರಮಕೈಗೊಳ್ಳಬೇಕು ಎಂದು ಸಂಜೆ ಅಥವಾ ನಾಳೆ ನಿರ್ಧರಿಸುತ್ತೇವೆ ಎಂದರು.

Home add -Advt

ಇನ್ನು ರಫ್ತು ಉದ್ಯಮಕ್ಕೆ ಗುರುವಾರದಿಂದ ಅನುಮತಿ ನೀಡಲಾಗುವುದು. ಮತ್ತಷ್ಟು ಕ್ಷೇತ್ರಗಳಿಗೆ ವಿನಾಯಿತಿ ನೀಡುವ ಬಗ್ಗೆ ಹಾಗೂ ಎರಡನೇ ಪ್ಯಾಕೇಜ್ ಬಗ್ಗೆಯೂ ಎರಡು ದಿನಗಳಲ್ಲಿ ಘೋಷಿಸಲಾಗುವುದು ಎಂದು ತಿಳಿಸಿದರು.

ದಾಂಡೇಲಿಯಲ್ಲಿ ಭಾರಿ ಪ್ರಮಾಣದ ಖೋಟಾ ನೋಟು ವಶ; ಬೆಳಗಾವಿಯ ವ್ಯಕ್ತಿ ಸೇರಿ 6 ಜನರ ಬಂಧನ

Related Articles

Back to top button