Film & Entertainment

*ಪತ್ನಿಗೆ ವಿಚ್ಛೇದನ ನೀಡಲು ಮುಂದಾದ ದೊಡ್ಮನೆ ಹುಡುಗ: ಯುವ ರಾಜ್ ಕುಮಾರ್ ಶ್ರೀದೇವಿ ದಾಂಪತ್ಯದಲ್ಲಿ ಬಿರುಕು*

ಪ್ರಗತಿವಾಹಿನಿ ಸುದ್ದಿ: ಅನ್ಯೋನ್ಯವಾಗಿದ್ದ ಸ್ಯಾಂಡಲ್ ವುಡ್ ನ ತಾರಾ ಜೋಡಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನ ಪಡೆಯುವ ಮೂಲಕ ಶಾಕ್ ನೀಡಿದ್ದರು. ಈ ಆಘಾತದ ಸುದ್ದಿಯಿಂದ ಅಭಿಮಾನಿಗಳು ಇನ್ನೂ ಚೇತರಿಸಿಕೊಳ್ಳುತ್ತಿರುವಾಗಲೇ ಚಂದನವನದಿಂದ ಇಂತದ್ದೇ ಮತ್ತೊಂದು ಸುದ್ದಿ ಹೊರಬಿದ್ದಿದೆ.

ಕನ್ನಡ ಚಿತ್ರರಂಗದ ದೊಡ್ಮನೆ ಹುಡುಗ ಯುವ ನಟ ಯುವರಾಜ್ ಕುಮಾರ್ ಪತ್ನಿಗೆ ವಿಚ್ಛೇದನ ನೀಡುವಂತೆ ಕೋರ್ಟ್ ನಿಂದ ನೋಟಿಸ್ ಕಳುಹಿಸಿದ್ದಾರೆ. ಯುವ ರಾಜ್ ಕುಮಾರ್ ಹಾಗೂ ಮೈಸೂರು ಮೂಲದ ಶ್ರೀದೇವಿ ಕಾಲೇಜು ದಿನಗಳಿಂದಲೂ ಪ್ರೀತಿಸುತ್ತಿದ್ದರು. ಬಳಿಕ 2019ರಲ್ಲಿ ಕುಟುಂಬದವರನ್ನು ಒಪ್ಪಿಸಿ ಅದ್ದೂರಿಯಾಗಿ ವಿವಾಹವಾಗಿದ್ದರು.

ಯುವ ರಾಜ್ ಕುಮಾರ್ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದರೆ ಪತ್ನಿ ಶ್ರೀದೇವಿ ರಾಜ್ ಕುಮಾರ್ ಅಕಾಡೆಮಿ ನಡೆಸುತ್ತಿದ್ದರು. ಆದರೆ ಯುವ ರಾಜ್ ಕುಮಾರ್ ಹಾಗೂ ಶ್ರೀದೇವಿ ಬಾಳಲ್ಲಿ ಬಿರುಕು ಮೂಡಿದೆ ಎಂದು ತಿಳಿದುಬಂದಿದೆ.

ಶ್ರೀದೇವಿ ಕಳೆದ ಒಂದು ವರ್ಷದಿಂದ ಅಮೆರಿಕಾದಲ್ಲಿ ವಾಸವಾಗಿದ್ದಾರೆ. ಇದೀಗ ಯುವ ರಾಜ್ ಕುಮಾರ್ ಪತ್ನಿಗೆ ವಿಚ್ಛೇದನ ನೀಡಲು ತೀರ್ಮಾನಿಸಿದ್ದು, ಶ್ರೀದೇವಿ ವಿಚ್ಛೇದನಕ್ಕೆ ನಿರಾಕರಿಸಿದ್ದಾರೆ ಎನ್ನಲಾಗಿದೆ. ಯುವ ರಾಜ್ ಕುಮಾರ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ಕೋರ್ಟ್ ಯುವ ಪತ್ನಿ ಶ್ರೀದೇವಿಗೆ ನೋಟಿಸ್ ನೀಡಿದೆ.


Related Articles

Back to top button