Kannada NewsKarnataka NewsLatestPolitics

*ಸಚಿವ ಜಮೀರ್ ಅಹ್ಮದ್ ವಿರುದ್ಧ ಐಟಿ ಇಲಾಖೆಗೆ ದೂರು ನೀಡಿದ ಹಿಂದೂ ಸಂಘಟನೆ ಕಾರ್ಯಕರ್ತ*

ಪ್ರಗತಿವಾಹಿನಿ ಸುದ್ದಿ: ವಸತಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ನೀಡಿರುವ ಘಟನೆ ನಡೆದಿದೆ.

ಹಿಂದೂಪರ ಸಂಘಟನೆ ಕಾರ್ಯಕರ್ತ ತೇಜಸ್ ಗೌಡ ಎಂಬುವವರು ಸಚಿವ ಜಮೀರ್ ಅಹ್ಮದ್ ವಿರುದ್ಧ ಐಟಿ ಇಲಾಖೆಗೆ ದೂರು ನೀಡಿದ್ದಾರೆ.

Home add -Advt

ಬಳ್ಲಾರಿ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬುವವರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಚಿವ ಜಮೀರ್ ಅಹ್ಮದ್, ಮೃತ ರಾಜಶೇಖರ್ ಅವರ ನಿವಾಸಕ್ಕೆ ತೆರಳಿ, ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಈ ವೇಳೆ ಮೃತನ ಕುಟುಂಬಕ್ಕೆ 25 ಲಕ್ಷ ನಗದು ಹಣ ಪರಿಹಾರ ನೀಡಿದ್ದರು. ಆರ್ ಬಿಐ ನಿಯಮದ ಪ್ರಕಾರ ಓರ್ವ ವ್ಯಕ್ತಿ 2 ಲಕ್ಷಕ್ಕಿಂತ ಹೆಚ್ಚು ನಗದು ಹಣ ಇಟ್ಟುಕೊಳ್ಳುವಂತಿಲ್ಲ. ಆದರೆ ಸಚಿವ ಜಮೀರ್ ಅಹ್ಮದ್ 25 ಲಕ್ಷ ನಗದು ಹಣ ನೀಡಿರುವುದು ಸಾಕಷ್ಟು ಚರ್ಚೆಗೆ ಕಾರಣವಗಿತ್ತು. ಈ ಹಿನ್ನೆಲೆಯಲ್ಲಿ ತೇಜಸ್ ಗೌಡ ಎಂಬುವವರು ಐಟಿ ಇಲಾಖೆಗೆ ದೂರು ನೀಡಿದ್ದು, ಹಣದ ಮೂಲದ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದಾರೆ.

Related Articles

Back to top button