ಲೋಕಸಭೆ ಚುನಾವಣೆ ಪೂರ್ವ ಸಿದ್ಧತೆಯ ಸಭೆ ನಡೆಸಿದ ಜಿಪಂ ಸಿಇಒ ರಾಹುಲ್ ಶಿಂಧೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಬೇಕು. ಮತದಾರರ ಪಟ್ಟಿಗಳನ್ನು ಪರಿಷ್ಕರಣೆ ಮಾಡಬೇಕು. ವಯಸ್ಕರ ಮತದಾರರ ಪಟ್ಟಿಗಳ ಮಾಹಿತಿ ಸಂಗ್ರಹಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.  ಚಿಕ್ಕೋಡಿ ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಫೆ.20) ಚಿಕ್ಕೋಡಿ ಲೋಕಸಭಾ ಚುನಾವಣೆ ಕುರಿತು ನಡೆದ ಪೂರ್ವ ಸಿದ್ಧತೆಯ ಸಭೆಯಲ್ಲಿ ಅವರು ಮಾತನಾಡಿದರು.  ಮತಗಟ್ಟೆಗಳನ್ನು ಸರಿಯಾಗಿ ಪರಿಶೀಲನೆ ಮಾಡಬೇಕು. ಒಂದು ವೇಳೆ ದುರಸ್ತಿ ಇದ್ದಲ್ಲಿ ಸರಿಪಡಿಸಿಕೊಳ್ಳಬೇಕು. ಸೂಕ್ಷ್ಮ, ಅತೀ … Continue reading ಲೋಕಸಭೆ ಚುನಾವಣೆ ಪೂರ್ವ ಸಿದ್ಧತೆಯ ಸಭೆ ನಡೆಸಿದ ಜಿಪಂ ಸಿಇಒ ರಾಹುಲ್ ಶಿಂಧೆ