Latest

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಶಾಸನ ರೂಪಿಸಿ

 

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

Home add -Advt

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಸಂಸತ್ತಿನಲ್ಲಿ ಶಾಸನ ರೂಪಿಸುವಂತೆ ಬೆಳಗಾವಿಯಲ್ಲಿ ಮಂಗಳವಾರ ನಡೆದ ಬೃಹತ್ ಜನಾಗ್ರಹ ಸಭೆ ಒತ್ತಾಯಿಸಿದೆ.

ಈ ಕುರಿತು ನಿರ್ಣಯ ಅಂಗೀಕರಿಸಿದ ಸಭೆ ಸಂಸದ ಸುರೇಶ ಅಂಗಡಿ ಮೂಲಕ ರಾಷ್ಟ್ರಪತಿಗೆ ಕಳುಹಿಸಲಾಯಿತು. ರಾಮಮಂದಿರ ನಿರ್ಮಾಣಕ್ಕಾಗಿ ಹಿಂದಿನಿಂದಲೂ ಹೋರಾಟ ನಡೆಯುತ್ತಲೇ ಬಂದಿದ್ದರೂ ಅದು ಈಡೇರಿಲ್ಲ. ಇದರಿಂದ ಪ್ರತಿಯೊಬ್ಬ ಹಿಂದೂವಿಗೂ ನಿರಾಸೆಯಾಗಿದೆ. ಪ್ರಕರಣ ನ್ಯಾಯಾಲಯದಲ್ಲಿ ಶೀಘ್ರ ಇತ್ಯರ್ಥವಾಗುವ ಲಕ್ಷಣವೂ ಕಾಣುತ್ತಿಲ್ಲ. ಹಾಗಾಗಿ ಈ ಕುರಿತು ಶಾಸನ ರಚಿಸುವುದು ಮಾತ್ರ ಉಳಿದಿರುವ ದಾರಿ ಎಂದು ನಿರ್ಣಯಲ್ಲಿ ಅಭಿಪ್ರಾಯಪಡಲಾಗಿದೆ.

ಅಮರಾವತಿಯ ಜೀತೇಂದ್ರ ಗುರುಮನೋಹರನಾಥ ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದರು. ಹಲವಾರು ಮಠಾಧೀಶರು, ಗಣ್ಯರು ಪಾಲ್ಗೊಂಡಿದ್ದರು. ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಸಮವೇಶ ಆಯೋಜಿಸಿದ್ದವು.

Related Articles

Back to top button