Latest
ಆಯವ್ಯಯಕ್ಕೆ ಪೂರ್ವಭಾವಿಯಾಗಿ ರೈತ ಮುಖಂಡರೊಂದಿಗೆ ಸಿಎಂ ಚರ್ಚೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಆಯವ್ಯಯಕ್ಕೆ ಪೂರ್ವಭಾವಿಯಾಗಿ ರೈತ ಮುಖಂಡರು ಹಾಗೂ ಪ್ರತಿನಿಧಿಗಳೊಂದಿಗೆ ಶುಕ್ರವಾರ ಚರ್ಚೆ ನಡೆಸಿದರು.
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕೃಷಿ ಸಚಿವ ಎನ್.ಎಚ್. ಶಿವಶಂಕರರೆಡ್ಡಿ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಪಶುಸಂಗೋಪನೆ ಸಚಿವ ವೆಂಕಟರಾವ್ ನಾಡಗೌಡ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಡಾ.ಎಸ್. ಸುಬ್ರಹ್ಮಣ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ರೈತ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.




