ಪ್ರಗತಿವಾಹಿನಿ ಸುದ್ದಿ, ಖಾನಾಪುರ
ಖಾನಾಪುರ ತಾಲೂಕಿನ ಹೆಬ್ಬಾಳ ಗ್ರಾಮದ ಬಳಿ ಬೆಳಗಾವಿ- ತಾಳಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಕಾರು ಮತ್ತು ಟಿಪ್ಪರ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ಮೂವರು ದುರ್ಮರಣಕ್ಕೀಡಾಗಿದ್ದಾರೆ.
ಮೃತರು ಬೆಂಗಳೂರಿನ ನಾಗೇನಹಳ್ಳಿ ನಿವಾಸಿಗಳು. ಘಟನೆಯಲ್ಲಿ ಇನ್ನೂ ಮೂವರಿಗೆ ಗಂಭೀರ ಗಾಯವಾಗಿದೆ.
ನಂದಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.