Latest

ನೆಣಿಗೆ ಶರಣಾದ ಕಾಕತಿ ಬಾಲಕ

ಪ್ರಗತಿವಾಹಿನಿ ಸುದ್ದಿ, ಅಗಸಗಿ

ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಲಕ್ಷ್ಮಿ ನಗರ ಬಾಲಕ ಅಥರ್ವ ರವಿ ವರ್ತೆ ( ೧೪) ಮಂಗಳವಾರ ಮದ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ಸಮದಲ್ಲಿ ನೇಣು ಹಾಕಿಕೊಂಡಿದ್ದಾನೆ.

Home add -Advt

ಮರಾಠಿ ಮಾಧ್ಯಮ 9ನೇ ತರಗತಿಯಲ್ಲಿ ಓದುತ್ತಿದ್ದ ಅಥರ್ವ ದುಷ್ಚಟಗಳಿಗೆ ಅಂಟುಕೊಂಡಿದ್ದನೆಂದು ಪೊಲೀಸರು ತಿಳಿಸಿದ್ದಾರೆ. ತಂದೆ ಇಲ್ಲದ ಈತ ಒಬ್ಬನೇ ಮಗನಾಗಿದ್ದನು. ತಾಯಿ ಖಾಸಗಿ ಆಸ್ಪತ್ರೆಯಲ್ಲಿ ಆಯಾ ಕೆಲಸ ಮಾಡುತ್ತಿದ್ದು, ಕುಟುಂಬ ನಿರ್ವಹಿಸಲು ಕಷ್ಟಕರವಾಗಿತ್ತು . ಈ ನಡುವೆ ಅಥರ್ವ ಹಣಕ್ಕಾಗಿ ಮನೆಯಲ್ಲಿ ಪೀಡಿಸುತ್ತಿದ್ದನೆಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ಆತನಿಗೆ ಅಂಟಿಕೊಂಡಿರುವ ದುಶ್ಚಟಗಳೆ ಕಾರಣವಾಗಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ.
ಕಾಕತಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button