Latest

ಬಹಿರಂಗ ಕ್ಷಮೆ ಕೇಳದಿದ್ದರೆ ಮಾನಹಾನಿ ಖಟ್ಲೆ -ಸತೀಶ್ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಕಡೋಲಿಯಲ್ಲಿ ನಡೆದ ಚುನಾವಣಾ ಪ್ರಚಾರ ಭಾಷಣದ ಸಂದರ್ಭದಲ್ಲಿ ” ಬ್ರಾಹ್ಮಣ ” ಪದವನ್ನು ತಾವು ಬಳಸದೇ ಇದ್ದರೂ, ಆ ಶಬ್ದ ಬಳಸಿ ಅವಹೇಳನ ಮಾಡಲಾಗಿದೆ ಎಂದು ಚುನಾವಣಾ ಆಯೋಗಕ್ಕೆ ಸುಳ್ಳು ದೂರು ನೀಡಿರುವ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಕೆ.ಎನ್. ವೆಂಕಟನಾರಾಯಣ 24 ಗಂಟೆಯೊಳಗೆ ಬಹಿರಂಗ ಕ್ಷಮೆ ಕೇಳಬೇಕು ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಆಗ್ರಹಿಸಿದ್ದಾರೆ.

Home add -Advt

IMG

ವೆಂಕಟನಾರಾಯಣ ಅವರು ನೀಡಿದ್ದ ದೂರಿನ ಅನ್ವಯ ಸತ್ಯಾಸತ್ಯತೆ ಪರಿಶೀಲಿಸಿರುವ ಚುನಾವಣಾ ಆಯೋಗವು ಸಚಿವರು ತಮ್ಮ ಭಾಷಣದಲ್ಲಿ ಎಲ್ಲಿಯೂ ” ಬ್ರಾಹ್ಮಣ ” ಪದವನ್ನು ಬಳಸಿಲ್ಲ ಎಂಬ ನಿರ್ಧಾರಕ್ಕೆ ಬಂದಿದೆ ಎಂದು ಸತೀಶ್ ಹೇಳಿದ್ದಾರೆ.

 

Related Articles

Back to top button