Latest

ಬಾಲಚಂದ್ರ ಜಾರಕಿಹೊಳಿಗೆ ಸತ್ಕಾರ

ಪ್ರಗತಿವಾಹಿನಿ ಸುದ್ದಿ, ಗೋಕಾಕ :
ಗೋಕಾಕ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಚುನಾವಣೆಯಲ್ಲಿ ಎಲ್ಲ 14 ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆಯಾಗಲು ಶ್ರಮಿಸಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಸಂಘದ ಆಡಳಿತ ಮಂಡಳಿ ಸದಸ್ಯರು ಸತ್ಕರಿಸಿದರು.
ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ಗೋಕಾಕ ಟಿಎಪಿಸಿಎಂಎಸ್ ನೂತನ ಅಧ್ಯಕ್ಷ ಅಶೋಕ ನಾಯಿಕ ಹಾಗೂ ಉಪಾಧ್ಯಕ್ಷ ವಿಠ್ಠಲ ಪಾಟೀಲ ಮತ್ತು ಸದಸ್ಯರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸತ್ಕರಿಸಿ, ಕೊಲ್ಹಾಪುರ ಮಹಾಲಕ್ಷ್ಮೀ ಭಾವಚಿತ್ರವನ್ನು ನೆನಪಿನ ಕಾಣಿಕೆ ಅರ್ಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು, ಗೋಕಾಕ ಟಿಎಪಿಸಿಎಂಎಸ್ ಅಭಿವೃದ್ಧಿಗಾಗಿ ಹೊಸ ಆಡಳಿತ ಮಂಡಳಿಯವರು ಶ್ರಮಿಸಬೇಕು. ರಾಜ್ಯದಲ್ಲಿಯೇ ಮಾದರಿ ಸಂಘವನ್ನಾಗಿ ಬೆಳೆಸುವಲ್ಲಿ ಮಹತ್ತರ ಪಾತ್ರವಹಿಸಬೇಕು. ಸುದೀರ್ಘ ಅವಧಿಗೆ ಅಧ್ಯಕ್ಷರಾಗಿದ್ದ ಬಸಗೌಡ ಪಾಟೀಲ(ನಾಗನೂರ) ಅವರ ಸಹಕಾರಿ ಅನುಭವದ ಮಾರ್ಗದರ್ಶನ ಪಡೆದು ಗೋಕಾಕ ಟಿಎಪಿಸಿಎಂಎಸ್‍ನ್ನು ಬಲವರ್ಧನೆಗೊಳಿಸಲು ಶಕ್ತಿಮೀರಿ ದುಡಿಯುವಂತೆ ನೂತನ ಆಡಳಿತ ಮಂಡಳಿಗೆ ಸಲಹೆ ಮಾಡಿದರು.
ಗೋಕಾಕ ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಿಕ, ಉಪಾಧ್ಯಕ್ಷ ವಿಠ್ಠಲ ಪಾಟೀಲ, ಸಂಘದ ನಿರ್ದೇಶಕರಾದ ಸುಭಾಸ ಢವಳೇಶ್ವರ, ಬಸಗೌಡ ಪಾಟೀಲ(ಮೆಳವಂಕಿ), ಈಶ್ವರ ಬೆಳಗಲಿ, ಗುರುನಾಥ ಕಂಕಣವಾಡಿ, ಶಿವನಗೌಡ ಪಾಟೀಲ, ಪ್ರಭಾಕರ ಬಂಗೆನ್ನವರ, ವೆಂಕನಗೌಡ ಪಾಟೀಲ, ಕೆಂಚಪ್ಪ ಮಂಟೂರ, ಸುರೇಶ ಗುಡ್ಡಾಕಾರ, ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
(ಪ್ರಗತಿವಾಹಿನಿ ಸುದ್ದಿಗಳನ್ನು ಎಲ್ಲಾ ಗ್ರುಪ್ ಗಳಿಗೆ ಹಾಗೂ ನಿಮ್ಮ ಪರಿಚಿತರಿಗೆ ಶೇರ್ ಮಾಡಿ)

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button