Latest

ಭಾರತದ ತಂತ್ರಜ್ಞಾನ ಸಫಲತೆಯನ್ನು ವಿಶ್ವಕ್ಕೆ ಪರಿಚಯಿಸಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಭಾರತವು ಮಾಹಿತಿ ತಂತ್ರಜ್ಞಾನದ ಬಳಕೆಯಲ್ಲಿ ಉಚ್ಚ ಸ್ಥಾನದಲ್ಲಿದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಸಂಪಾದಿಸುವುದರೊಂದಿಗೆ ಕಾಲೇಜಿನಲ್ಲಿ ಅಧ್ಯಯನ ಮಾಡಿದ ಮಾಹಿತಿ ತಂತ್ರಜ್ಞಾನದ ಕೌಶಲಗಳನ್ನು ದೇಶ ವಿದೇಶಗಳಲ್ಲಿ ಪ್ರಸಾರ ಮಾಡಬೇಕು. ಭಾರತದ ಮಾಹಿತಿ ತಂತ್ರಜ್ಞಾನದ ಸಫಲತೆಯನ್ನು ವಿಶ್ವಕ್ಕೆ ಪರಿಚಯಿಸುವ ಕೆಲಸ ಮಾಡಬೇಕು ಎಂದು ಕನ್ನಡ ಚಲನಚಿತ್ರ ನಿರ್ಮಾಪಕ ಗಣೇಶ ಪಾಟೀಲ ಕರೆ ನೀಡಿದರು.

ನಗರದ ಕೆಎಲ್‌ಇ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ಗಣಕ ವಿಜ್ಞಾನ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾದ ಒಂದು ದಿನದ ರಾಷ್ಟ್ರಮಟ್ಟದ ಉಗಮ-೨ಕೆ೧೯ ತಾಂತ್ರಿಕ ಉತ್ಸವ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಡಾ.ವಿ.ಡಿ. ಯಳಮಲಿ, ಕಳೆದ ಐದು ವರ್ಷಗಳಿಂದ ಗಣಕವಿಜ್ಞಾನ ವಿಭಾಗವು ತಾಂತ್ರಿಕ ಉತ್ಸವವನ್ನು ಆಯೋಜಿಸುತ್ತಿದ್ದು ವಿದ್ಯಾರ್ಥಿಗಳಲ್ಲಿ ಸುಪ್ತವಾಗಿ ಹುದುಗಿರುವ ತಾಂತ್ರಿಕ ಕೌಶಲಗಳ ಅನಾವರಣಕ್ಕೆ ವೇದಿಕೆ ಒದಗಿಸಿದೆ ಎಂದರು.
ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ ಮತ್ತು ಕರ್ನಾಟಕ ರಾಜ್ಯಗಳ ೩೦೦ ವಿದ್ಯಾರ್ಥಿ ಪ್ರತಿನಿಧಿಗಳು ಭಾಗವಹಿಸಿದ್ದರು. ರಸಪ್ರಶ್ನೆ, ಮಾರುಕಟ್ಟೆ, ದೃಶ್ಯವೀಕ್ಷಣೆ, ಖಜಾನೆ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅಪೂರ್ವಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಪ್ರೊ. ಏಕಾಂತಯ್ಯ ಸ್ವಾಮಿ ಸ್ವಾಗತಿಸಿದರು. ಅಮೀರ ಪರಿಚಯಿಸಿದರು. ಪ್ರಾಪ್ತಿ ವಂದಿಸಿದರು. ರುಮಾನಾ ಹಾಗೂ ಮನೋಜ ನಿರೂಪಿಸಿದರು.

Home add -Advt

Related Articles

Back to top button