Latest
ಮಹದಾಯಿ: ಸೋಮವಾರ ಸುಪ್ರಿಂ ನಲ್ಲಿ ವಿಚಾರಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕರ್ನಾಟಕ ಸಲ್ಲಿಸಿರುವ ಮೇಲ್ಮನವಿ ಸರ್ವೋಚ್ಛ ನ್ಯಾಯಾಲಯದಲ್ಲಿ ಸೋಮವಾರ ವಿಚಾರಣೆಗೆ ಬರಲಿದೆ.
ಮಹದಾಯಿ ನ್ಯಾಯಾಧಿಕರಣ ಆ.14ರಂದು ನೀಡಿರುವ ನೀರು ಹಂಚಿಕೆಯಿಂದ ನಮಗೆ ನ್ಯಾಯ ಸಿಕ್ಕಿಲ್ಲ ಎಂದು ಕರ್ನಾಟಕ ಸವ್ರೋಚ್ಛ ನ್ಯಾಯಾಲಯದ ಮೆಟ್ಟಿಲೇರಿದೆ. ಈ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಂಬಂಧ ಸುಪ್ರಿಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ ಎಂದು ನ್ಯಾಯವಾದಿ ಎಂ.ಬಿ.ಜಿರಲಿ ಪ್ರಗತಿವಾಹಿನಿಗೆ ಮಾಹಿತಿ ನೀಡಿದ್ದಾರೆ.




