Latest

ಮಾ.18 ರಂದು ವಿಟಿಯು ಘಟಿಕೋತ್ಸವ; 418 ಪಿಎಚ್‌ಡಿ ಪ್ರಧಾನ

ದಾವಣಗೆರೆಯ ಸುಚಿತ್ರಾ ಎನ್ ಬಂಗಾರದ ಹುಡುಗಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ೧೮ ನೇ ವಾರ್ಷಿಕ ಘಟಿಕೋತ್ಸವವನ್ನು ೨೦೧೯ ಮಾರ್ಚ್ ೧೮ ರಂದು ಬೆಳಗ್ಗೆ ೧೦ ಗಂಟೆಗೆ ವಿಟಿಯುನ ಜ್ಞಾನಸಂಗಮ ಅವರಣದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಕರಿಸಿದ್ದಪ್ಪ ಅವರು ಹೇಳಿದರು.
ಸೋಮವಾರ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿ ಘಟಿಕೋತ್ಸವಕ್ಕೆ  ಉಪರಾಷ್ಟ್ರಪತಿಗಳಾದ ಎಂ.ವೆಂಕಯ್ಯ ನಾಯ್ಡು ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು, ಕರ್ನಾಟಕ ಸರಕಾರದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಟಿಯುನ ಕುಲಾಧಿಪತಿಗಳಾದ ವಜುಬಾಯಿ ಆರ್ ವಾಲಾ ಅವರು ಅಧ್ಯಕ್ಷತೆ ವಹಿಸುವರು ಹಾಗೂ ಪದವಿ ಪ್ರದಾನ ಮಾಡುವರು,
ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ಜಿ.ಟಿ.ದೇವೇಗೌಡ ಹಾಗೂ ವಿಟಿಯುನ ಎಲ್ಲ ಸಮಕುಲಾಧಿಪತಿಗಳು ಸಮಾರಂಭದಲ್ಲಿ ಉಪಸ್ಥಿತರಿರುವರು ಎಂದು ಹೇಳಿದರು.


ದಾವಣಗೆರೆಯ ಜೈನ್ ಇಂಜಿನಿಯರಿಂಗ್ ಆಪ್ ಟೆಕ್ನಾಲಜಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿ ಸುಚಿತ್ರಾ ಎನ್ ಎಂಬವರು  ಅತಿ ಹೆಚ್ಚು ಅಂಕ ಪಡೆದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಒಟ್ಟು ೯ ಬಂಗಾರದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.


ಖ್ಯಾತ ಅಭಿಯಂತರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಬಿ. ಗಿರೀಶ್ ಭಾರದ್ವಾಜ್ ಅವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

Home add -Advt

೪೧೮ ಪಿಎಚ್‌ಡಿ ಪ್ರಧಾನ:
ವಿಶ್ವ ವಿದ್ಯಾಲಯದ ೧೮ ನೇ ಘಟಿಕೋತ್ಸವದಲ್ಲಿ ರ್ಯಾಂಕ ಪಡೆದ ಆಯಾ ವಿಬಾಗದ ವಿದ್ಯಾರ್ಥಿಗಳಿಗೆ ಬಂಗಾರದ ಪದಕ ನಿಡಲಾಗುವುದು ಅವರುಗಳ ವಿವರ ೬೪,೫೮೧ ಬಿ ಇ, ೬೧೯ ಬಿ. ಆರ್ಕಿಟೆಕ್ಚರ್ , ೪೪೨೫ ಎಮ್ ಬಿ ಎ, ೧೮೦೧ ಎಂಎಸ್ಸಿ, ೨೮೫೯ ಎಂ.ಟೆಕ್, ೨೬ ಎಂ. ಆರ್ಕಿಟೆಕ್ಚರ್, ೪೧೮ ಪಿಎಚ್ ಡಿ ಹಾಗೂ ೩೩ ಎಂ.ಎಸ್ಸಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪದವಿಗಳನ್ನು ಪ್ರದಾನ ಮಾಡಲಾಗುವುದು ಎಂದರು.
ಘಟಿಕೋತ್ಸವಕ್ಕೆ ಆಗಮಿಸುವ ವಿದ್ಯಾರ್ಥಿಗಳು, ಪಾಲಕರು, ಹಾಗೂ ಆಹ್ವಾನಿತರಿಗೆ ಮಾರ್ಚ್ ೧೮ ರಂದು ಬೆಳಗಾವಿ ನಗರದ ಚನ್ನಮ್ಮ ವೃತ್ತದಿಂದ ಬೆಳಗ್ಗೆ ೬ರಿಂದ ಸಂಜೆ ೮ ಗಂಟೆಯ ವರೆಗೆ ಬಸ್ ಗಳ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಕುಲಪತಿ ಡಾ. ಕರಿಸಿದ್ದಪ್ಪ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ವಿಟಿಯುನ ಪ್ರಭಾರಿ ಮೌಲ್ಯಮಾಪನ ಕುಲಸಚಿವರಾದ ಡಾ. ಸತೀಶ ಅಣ್ಣಿಗೇರಿ ಉಪಸ್ಥಿತರಿದ್ದರು.

Related Articles

Back to top button