ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಮೇ 31 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 33 ಕೆ.ವ್ಹಿ. ಸದಾಶಿವ ನಗರ ಉಪಕೇಂದ್ರದಿಂದ ವಿತರಣೆಯಾಗುವ ವಾಟರ್ ಸಪ್ಲಾಯ್, ಹಿಂಡಲಗಾ, ವಿಜಯ ನಗರ, ಗಣೇಶಪೂರ, ಸರಸ್ವತಿ ನಗರ, ಕಂಗ್ರಾಳಿ ಕೆ.ಎಚ್, ಅಲತಗಾ, ಅಂಬೇವಾಡಿ, ಮನ್ನೂರ, ಗೋಜಗಾ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.